ಹವಾಮಾನ ವೈಪರೀತ್ಯ – ಸಿಎಂ ರಾಯಚೂರು ಪ್ರವಾಸ ರದ್ದು

Public TV
1 Min Read

– 998 ಕೋಟಿ ವೆಚ್ಚದ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ

ರಾಯಚೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪ್ರವಾಸ ರದ್ದಾದ ಹಿನ್ನೆಲೆ ರಾಯಚೂರಿನ ಲಿಂಗಸುಗೂರಿನ ಹಟ್ಟಿ ಪಟ್ಟಣದಲ್ಲಿ ಆಯೋಜಿಸಿದ್ದ ʻಹಟ್ಟಿ ಚಿನ್ನದಗಣಿ (Hatti Gold Mine) ಕಂಪನಿ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣʼದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಇಂದು (ಆಗಸ್ಟ್ 6) ಮಧ್ಯಾಹ್ನ 12ಕ್ಕೆ ನಡೆಯಬೇಕಿದ್ದ 998 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಅಡಿಗಲ್ಲು ಸಮಾರಂಭಕ್ಕೆ ಸಿಎಂ ಗೈರು ಹಿನ್ನೆಲೆ ಕಾರ್ಯಕ್ರಮವನ್ನ ಮುಂದೂಡಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ಸಿಎಂ ರಾಯಚೂರು (Raichur) ಪ್ರವಾಸ ರದ್ದಾಗಿದೆ. ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತ ಸುಮಾರು 10ಕ್ಕೂ ಅಧಿಕ ಪೂರ್ವಸಿದ್ಧತೆ ಸಭೆ ಮಾಡಿತ್ತು. ವೇದಿಕೆ ಸಿದ್ಧತೆ ಜೊತೆಗೆ ಸುಮಾರು 5 ಸಾವಿರಕ್ಕೂ ಅಧಿಕ ಜನರಿಗಾಗಿ ಆಸನಗಳ ವ್ಯವಸ್ಥೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Raichuru Hatti gold mine program

1980ರಲ್ಲಿ ಅಂದಿನ ಸಿಎಂ ಆರ್.ಗುಂಡೂರಾವ್ ಬಿಟ್ಟರೆ ಬೇರೆ ಯಾವ ಮುಖ್ಯಮಂತ್ರಿಯೂ ಅಧಿಕೃತ ಕಾರ್ಯಕ್ರಮಕ್ಕಾಗಿ ಹಟ್ಟಿ ಚಿನ್ನದಗಣಿಗೆ ಭೇಟಿ ನೀಡಿರಲಿಲ್ಲ. ಸಿದ್ದರಾಮಯ್ಯ ಎರಡನೇ ಸಿಎಂ ಆಗಿ ಭೇಟಿ ನೀಡುತ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದವರಿಗೆ ಈಗ ನಿರಾಸೆಯಾಗಿದೆ. ಬೆಂಗಳೂರಿನಿಂದ ಗಿಣಿಗೇರಾ ಏರ್ ಸ್ಟ್ರಿಪ್‌ಗೆ ವಿಮಾನದಲ್ಲಿ ಆಗಮಿಸಿ, ಹಟ್ಟಿಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಬೇಕಿದ್ದ ಸಿಎಂ ಪ್ರವಾಸ ಕಾರ್ಯಕ್ರಮ ಹವಾಮಾನ ವೈಪರೀತ್ಯ ಹಿನ್ನೆಲೆ ರದ್ದಾಗಿದೆ. ಇದನ್ನೂ ಓದಿ: ಆ.6ಕ್ಕೆ ರಾಯಚೂರಿಗೆ ಸಿಎಂ, ಡಿಸಿಎಂ – ಹಟ್ಟಿ ಚಿನ್ನದಗಣಿಯ 998 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ

Share This Article