ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 24-19
ಮಂಗಳೂರು: 25-23
ಶಿವಮೊಗ್ಗ: 24-20
ಬೆಳಗಾವಿ: 25-21
ಮೈಸೂರು: 26-21
ಮಂಡ್ಯ: 27-21
ಮಡಿಕೇರಿ: 21-18
ರಾಮನಗರ: 32-26
ಹಾಸನ: 23-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 23-19
ಕೋಲಾರ: 25-20
ತುಮಕೂರು: 24-20
ಉಡುಪಿ: 25-23
ಕಾರವಾರ: 27-24
ಚಿಕ್ಕಮಗಳೂರು: 21-18
ದಾವಣಗೆರೆ: 25-21
ಹುಬ್ಬಳ್ಳಿ: 26-21
ಚಿತ್ರದುರ್ಗ: 24-21
ಹಾವೇರಿ: 26-21
ಬಳ್ಳಾರಿ: 29-22
ಗದಗ: 26-21
ಕೊಪ್ಪಳ: 28-22
ರಾಯಚೂರು: 28-23
ಯಾದಗಿರಿ: 28-23
ವಿಜಯಪುರ: 27-22
ಬೀದರ್: 28-23
ಕಲಬುರಗಿ: 28-23
ಬಾಗಲಕೋಟೆ: 28-22