ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಧಾಮದಲ್ಲಿ (Cauvery Wildlife Sanctuary) ಎರಡು ಹುಲಿ ಮರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹಸಿವಿನಿಂದ ನಿತ್ರಾಣಗೊಂಡು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಸಾವನ್ನಪ್ಪಿವೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ
ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ಹುಲಿ ಮರಿಗಳು ಬೇರ್ಪಟ್ಟಿದ್ದವು ಎಂಬ ಮಾಹಿತಿಯಿದೆ. ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನ ವೇಳೆ ಹುಲಿ ಮರಿಗಳ ಸಾವು ಬೆಳಕಿಗೆ ಬಂದಿದೆ. ಎರಡು ಮೂರು ದಿನಗಳ ವ್ಯತ್ಯಾಸದಲ್ಲಿ ಹುಲಿ ಮರಿಗಳು ಸಾವನ್ನಪ್ಪಿದೆ. ತಾಯಿಯಿಂದ ಬೇರ್ಪಟ್ಟು ಹಸಿವಿನಿಂದ ನಿತ್ರಾಣಗೊಂಡು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.