ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕರ ಕಾರು ಚಾಲಕ ಪೊಲೀಸ್‌ ವಶಕ್ಕೆ

By
1 Min Read

ಚಿತ್ರದುರ್ಗ: ಕೊಲೆ ಪ್ರಕರಣವೊಂದರಲ್ಲಿ ಹೊಸದುರ್ಗ ಕಾಂಗ್ರೆಸ್ ಶಾಸಕ ಬಿ.ಜಿ.ಗೋವಿಂದಪ್ಪ (B.G.Govindappa) ಅವರ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಯಶವಂತ್‌ ಸೇರಿ ನಾಲ್ವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ನಾಪತ್ತೆಯಾಗಿದ್ದರು. ಮಾರ್ಚ್ 21 ರಂದು ಈ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಲಿಂಗದಳ್ಳಿ ಬಳಿ ಪ್ರಸನ್ನ ಶವವಾಗಿ ಪತ್ತೆಯಾಗಿದ್ದರು. ಇದನ್ನೂ ಓದಿ: ಬಸವಣ್ಣ ದೇವರ ಮಠದ ಶಿಕ್ಷಕಿ, ಹೆಡ್‌ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ಸಾವು

- Advertisement -

- Advertisement -

ಜುಲೈ 20 ರಂದು ಪ್ರಸನ್ನ ಕೊಲೆ ಪ್ರಕರಣ ಬಯಲಾಗಿದೆ. ಪ್ರಕರಣ ಸಂಬಂಧ ಪ್ರಸನ್ನ ಪತ್ನಿ, ಶಾಸಕ ಬಿ.ಜಿ.ಗೋವಿಂದಪ್ಪ ಕಾರು ಚಾಲಕ ಯಶವಂತ್, ಲೋಹಿತ್, ವೀರೇಶ್ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಕೊಲೆ ಮಾಡಿ ಲಿಂಗದಳ್ಳಿ ಬಳಿ ಅರಣ್ಯದಲ್ಲಿ ಶವ ಎಸೆಯಲಾಗಿತ್ತು. ಲಿಂಗದಳ್ಳಿ ಮತ್ತು ಹೊಸದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಇದನ್ನೂ ಓದಿ: ಕೆಜಿಎಫ್‌ ಬಾಬುಗೆ ಆರ್‌ಟಿಓ ಶಾಕ್‌ – ಬಿಗ್‌ ಬಿ, ಆಮೀರ್‌ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ?

Share This Article