ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

By
1 Min Read

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್‌ಐಟಿ (SIT) ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ (Dharmasthala) ತೆರಳುವ ನಿರೀಕ್ಷೆ ಇದೆ.

- Advertisement -

ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ (Belthangady) ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ. ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

- Advertisement -

- Advertisement -

ಈ ಕಚೇರಿಯಿಂದಲೇ ಎಸ್‌ಐಟಿ ತನಿಖೆ ಆರಂಭಿಸಲಿದ್ದು, ಈಗಾಗಲೇ ಎಲ್ಲಾ ವ್ಯವಸ್ಥೆಗಳನ್ನ ಮಾಡಿಕೊಂಡಿದೆ. ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

- Advertisement -

ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರಿನ ಎಸ್‌ಪಿ ಕಚೇರಿ ಆವರಣದಲ್ಲಿ ಎಸ್‌ಐಟಿ ಕಚೇರಿ ಸಿದ್ಧವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Share This Article