ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

By
1 Min Read

ಶ್ರೀನಗರ: ಆಪರೇಷನ್‌ ಸಿಂಧೂರದ (Operation Sindoor) ಬಳಿಕ ಮೊದಲ ಬಾರಿಗೆ ಪಾಕಿಸ್ತಾನ (Pakistan) ಕದನ ವಿರಾಮ ಉಲ್ಲಂಘಿಸಿದೆ.

ಪೂಂಚ್ ವಲಯದಲ್ಲಿ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿ ಬೆನ್ನಲ್ಲೇ ಭಾರತೀಯ ಸೇನೆ (Indian Army) ಪ್ರತಿ ದಾಳಿ ನಡೆಸಿದೆ.

ಸರಿ ಸುಮಾರು ಹದಿನೈದು ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

370 ನೇ ವಿಧಿಯನ್ನು ರದ್ದುಗೊಳಿಸಿದ 6 ನೇ ವಾರ್ಷಿಕೋತ್ಸವದಂದು ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್‌ 05, 2019 ರಂದು ರದ್ದುಗೊಳಿಸಲಾಗಿತ್ತು.

Share This Article