ನಗರಗಳಲ್ಲಿನ ಬೀದಿನಾಯಿ, ಅನಾಥ ಪ್ರಾಣಿಗಳ ತೆರವಿಗೆ ವಿಶೇಷ ಅಭಿಯಾನ – ರಾಜಸ್ಥಾನ ಹೈಕೋರ್ಟ್

By
1 Min Read

ಜೈಪುರ: ಜೋಧ್‌ಪುರ, ಉದಯಪುರ ಹಾಗೂ ಜೈಪುರ ನಗರಗಳ ಬೀದಿನಾಯಿ (Street Dogs) ಮತ್ತು ಅನಾಥ ಪ್ರಾಣಿಗಳನ್ನು ತೆರೆವುಗೊಳಿಸುವುದಕ್ಕಾಗಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ (Rajasthan Highcourt) ಆದೇಶಿಸಿದೆ.

- Advertisement -

ಅಭಿಯಾನದ ವೇಳೆ ತೆರವಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವಕಾಶವಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಕುಲದೀಪ್ ಮಾಥುರ್ ಮತ್ತು ರವಿ ಚಿರಾನಿಯಾ ಅವರಿದ್ದ ದ್ವಿ-ಸದಸ್ಯ ಪೀಠ ಹೇಳಿದೆ. ಆದರೆ ಅಭಿಯಾನದ ವೇಳೆ ಪ್ರಾಣಿಗಳಿಗೆ ಹಾನಿಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕೂಡ ಸ್ಪಷ್ಟಪಡಿಸಿದೆ.ಇದನ್ನೂ ಓದಿ: `ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್

- Advertisement -

ಈ ಕುರಿತು ನಾಗರಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ಐಡಿ ಒದಗಿಸಬೇಕು. ಅದಲ್ಲದೇ ಬೀದಿ ನಾಯಿಗಳು ಹಾಗೂ ಅನಾಥ ಪ್ರಾಣಿಗಳಿಗೆ ಪುರಸಭೆಗಳು, ಖಾಸಗಿ ವ್ಯಕ್ತಿಗಳು ಅಥವಾ ಇನ್ಯಾವುದೇ ಸಂಸ್ಥೆಗಳು ತಾವು ನಿರ್ವಹಿಸುವ ಆಶ್ರಯ ಕೇಂದ್ರಗಳಲ್ಲಿ ತಮಗಿಷ್ಟವಿದ್ದಲ್ಲಿ ಆಹಾರ ನೀಡಬಹುದು ಎಂದು ಹೇಳಿದೆ.

- Advertisement -

ಸಾಮಾನ್ಯ ಜನರು ಭಾವನೆ, ಧಾರ್ಮಿಕ ನಂಬಿಕೆ ಅಥವಾ ಪ್ರಾಣಿಗಳ ಮೇಲಿನ ಪ್ರೀತಿಯಿಂದಾಗಿ ಆಹಾರ ನೀಡಲು ಅಥವಾ ಅವುಗಳನ್ನು ನೋಡಿಕೊಳ್ಳಲು ಬಯಸಿದರೆ ಅಂತಹ ಚಟುವಟಿಕೆಗಳನ್ನು ಪ್ರಾಣಿ ಆಶ್ರಯ ಕೇಂದ್ರದಲ್ಲಿ ಮಾಡಬಹುದು ಎಂದು ತಿಳಿಸಿದೆ.

- Advertisement -

ರಸ್ತೆಗಳಿಂದ ಬೀದಿ ಪ್ರಾಣಿಗಳನ್ನು ತೆರವುಗೊಳಿಸುವಂತೆ ಮತ್ತು ವಾಹನಗಳ ಮುಕ್ತ ಸಂಚಾರಕ್ಕಾಗಿ ನಿಯಮಿತವಾಗಿ ಗಸ್ತು ತಿರುಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಪೀಠ ನಿರ್ದೇಶಿಸಿದೆ. ರಾಜ್ಯದಲ್ಲಿ ನಾಯಿ ಕಡಿತ, ಹೆದ್ದಾರಿಯಲ್ಲಿ ಅನಾಥ ದನಗಳ ಹಾವಳಿಯಿಂದ ಹೆಚ್ಚು ಸಾವು-ನೋವು ಸಂಭವಿಸುತ್ತಿದ್ದ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಈ ಕುರಿತು ಪ್ರತಿಕ್ರಿಯಿಸಲು ರಾಜ್ಯ ಸರ್ಕಾರ ಮತ್ತು ಪುರಸಭೆ ಸಮಯಾವಕಾಶದ ಅಗತ್ಯವಿದೆ ಎಂದು ಸೋಮವಾರ (ಆ.11) ಕೋರಿದ್ದವು. ಸದ್ಯ ಹೈಕೋರ್ಟ್ ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.ಇದನ್ನೂ ಓದಿ: ಯಾವ ಕಾರಣಕ್ಕೆ ರಾಜಣ್ಣ ಅವ್ರನ್ನ ವಜಾ ಮಾಡಿದ್ದಾರೆ ಗೊತ್ತಿಲ್ಲ: ಪರಮೇಶ್ವರ್

Share This Article