ದಾವಣಗೆರೆ | ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ ವಶಕ್ಕೆ

By
1 Min Read

ದಾವಣಗೆರೆ: ಜಗಳೂರು (Jagaluru) ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಶವ ಪತ್ತೆಯಾಗಿದ್ದರಿಂದ ಆಕೆಯ ಪತಿಯೇ (Husband) ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಮನೆಗಳ್ಳತನ – ಬೆಂಗಳೂರಿನ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮಹಿಳೆಯ ಪತಿ ಬಾಲರಾಜ್‍ನನ್ನು ವಶಕ್ಕೆ ಪಡೆದು ಜಗಳೂರು ಪೊಲೀಸರು ವಿಚಾರಣೆ ನಡಸುತ್ತಿದ್ದಾರೆ.

ಸ್ಥಳಕ್ಕೆ ಶ್ವಾನದಳ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆಗೈದ 52ರ ವ್ಯಕ್ತಿ

Share This Article