– ಹುಲಿ ಕಂಡು ಆತಂಕದಲ್ಲಿ ಗ್ರಾಮಸ್ಥರು
ಚಾಮರಾಜನಗರ: ಜಿಲ್ಲೆಯ ಕಗ್ಗಲಹುಂಡಿ ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.
ಈಗಾಗಲೇ ಸಾಕಷ್ಟು ಬಾರಿ ಜನರಿಗೆ ಹುಲಿ ದರ್ಶನವಾಗಿದೆ. ಹುಲಿ ಸೆರೆ ಹಿಡಿಯಲು ಮುಂದಾಗದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಜನರ ಆಕ್ರೋಶಕ್ಕೆ ಮಣಿದು ಸದ್ಯ ಕೂಂಬಿಂಗ್ ನಡೆಸಲು ಅರಣ್ಯ ಇಲಾಖೆ ಮುಂದಾಗಿದೆ.
ಬಂಡೀಪುರದಲ್ಲಿ ಹುಲಿ ಸಂಖ್ಯೆ ಹೆಚ್ಚಳ ಹಿನ್ನೆಲೆ ಕಾಡಂಚಿನ ಗ್ರಾಮದಲ್ಲಿ ಹುಲಿಗಳು ಕಾಣಿಸಿಕೊಳ್ಳುತ್ತಿವೆ. ಇದೀಗ ಗುಂಡ್ಲುಪೇಟೆ ತಾಲೂಕಿನ ಕಗ್ಗಲಹುಂಡಿ ಗ್ರಾಮದ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿಯಿಂದಲೂ ಬಂಡೀಪುರ ಪೊಲೀಸರು ಅಲರ್ಟ್ ಆಗಿದ್ದಾರೆ.
ಗ್ರಾಮಸ್ಥರು ಹೊರಗಡೆ ಓಡಾಡಲು ಭಯಪಡುತ್ತಿದ್ದಾರೆ. ಜನರ ಒತ್ತಾಯಕ್ಕೆ ಮಣಿದು, ಆನೆಗಳನ್ನು ಬಳಸಿಕೊಂಡು ಕೂಂಬಿಂಗ್ ಕೆಲಸಕ್ಕೆ ಇಲಾಖೆ ಮುಂದಾಗಿದೆ.