ಕೊಡಗಿನಲ್ಲಿ ನಿರಂತರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು – ಬಿಜೆಪಿ ನಿಯೋಗದಿಂದ ಸರ್ವೇ ಕಾರ್ಯ

Public TV
3 Min Read

– ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ಸಮೀಕ್ಷೆ
– ಬೆಳೆಗಾರರಿಗೆ ಕನಿಷ್ಠ 2 ಲಕ್ಷ ಪರಿಹಾರಕ್ಕೆ ಆಗ್ರಹ

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಈ ಬಾರಿ ಮೇ ತಿಂಗಳಿನಿಂದಲ್ಲೇ ನಿರಂತರ ಮಳೆಯಾಗುತ್ತಿರುವುದರಿಂದ (Rainfall) ನಾನಾ ರೀತಿಯ ಅವಾಂತರ ಮುಂದುವರೆದಿದೆ. ಅಲ್ಲದೆ ಸುರಿಯುತ್ತಿರುವ ಮಳೆಯ ಪರಿಣಾಮ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕಿನ ಹಲವಾರು ಭಾಗದಲ್ಲಿ ಕಾಫಿ ಬೆಳೆಗಳು (Coffee Crop) ನೆಲಕಚ್ಚಿದೆ. ಕಾಫಿ ತೋಟಗಳು ಸಂಪೂರ್ಣವಾಗಿ ಹಾಳಾಗಿದ್ದು ಈ ವರ್ಷ ಹಾಗೂ ಮುಂದಿನ ವರ್ಷಕ್ಕೆ ಬೆಳೆಯೇ ಇಲ್ಲದಂತಾಗಿ ಬೆಳೆಗಾರರು ಕಂಗಾಲಾಗಿದ್ದಾರೆ.

ಕಾಫಿ ಬೆಳೆಗಾರರ ಸ್ಥಿತಿಯನ್ನ ಅರಿತ ಕೊಡಗಿನ ಬಿಜೆಪಿ ನಿಯೋಗ ಕಾಫಿ ತೋಟಗಳಲ್ಲಿ ಸರ್ವೇ ಕಾರ್ಯ (Crop Survey) ನಡೆಸಿ ಕೇಂದ್ರ ಹಾಗೂ ರಾಜ್ಯ ‌ಸರ್ಕಾರಕ್ಕೆ ವರದಿ ನೀಡಲು ಮುಂದಾಗಿದೆ..

ಜಿಲ್ಲೆಯಲ್ಲಿ ಈ ಬಾರಿ ದೀರ್ಘಾವಧಿ ಮಳೆ ಆಗಿರುವುದರಿಂದ ಪ್ರಮುಖ ಬೆಳೆ ಕಾಫಿ ಸೇರಿದಂತೆ ಇತರ ತೋಟಗಾರಿಕಾ ಬೆಳೆಗಳಿಗೂ ಕೊಳೆ ರೋಗದ ಸಮಸ್ಯೆ ಎದುರಾಗಿದೆ. ಅತಿಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಈಗಾಗಲೇ ಕಾಫಿ ಉದುರಲಾರಂಭಿಸಿದೆ. ಇದರಿಂದ ಈ ಬಾರಿ ಜಿಲ್ಲೆಯಲ್ಲಿ ಕಾಫಿ ಉತ್ಪಾದನೆದು ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಜಿಲ್ಲೆಯಲ್ಲಿ ಶೀತಗಾಳಿ ಹೆಚ್ಚಾಗಿರುವ ಪರಿಣಾಮ ತೋಟಗಾರಿಕಾ ಬೆಳೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಉಂಟುಮಾಡಿದೆ. ಮುಖ್ಯವಾಗಿ ಕಾಫಿ ಬೆಳೆ ಗಾರರಿಗೆ ಬೆಳೆ ನಷ್ಟದ ಭೀತಿ ಎದುರಾಗಿದೆ.

ಜೊತೆಗೆ ಕಾಳು ಮೆಣಸು, ಅಡಿಕೆ ಸೇರಿದಂತೆ ಎಲ್ಲಾ ರೀತಿಯ ತೋಟಗಾರಿಕಾ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ. ಕೊಡಗಿಗೆ ನಿರಂತರವಾಗಿ ಮಳೆ ಬಂದ್ರೆ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಕುಡಿಯುವ ನೀರು ಬಂತು ಎಂದು ನಿಟ್ಟುಸಿರು ಬೀಡುತ್ತಾರೆ‌. ಆದರೆ ಇಲ್ಲಿನ ಜನರ ಪರಿಸ್ಥಿತಿಯ ಬಗ್ಗೆ ಯಾರಿಗೂ ಅರಿವು ಅಗೋಲ್ಲ. ಮೇ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೂ ನಿರಂತರವಾಗಿ 200 ಮೀಮಿ ನಷ್ಟು ಮಳೆ ಆಗಿದೆ. ಇದರಿಂದ ಮುಂದಿನ ವರ್ಷದ ಬೆಳೆ ಪ್ರಮಾಣದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣವೇ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಬಿಜೆಪಿ ನಿಯೋಗದಿಂದ ಸಮೀಕ್ಷೆ
ಕೊಡಗಿನ ಬಿಜೆಪಿ ನಾಯಕರು ಸೋಮವಾರಪೇಟೆ ತಾಲ್ಲೂಕು ಹಾಗೂ ಮಡಿಕೇರಿ ತಾಲೂಕಿನ ಹಲವಾರು ಗ್ರಾಮೀಣ ಭಾಗದ ಕಾಫಿ ತೋಟಗಳಿಗೆ ತೆರಳಿ ಕಾಫಿ ತೋಟಗಳ ಸರ್ವೇ ಕಾರ್ಯ ನಡೆಸಿದ್ದಾರೆ.

2 ಲಕ್ಷ ಪರಿಹಾರಕ್ಕೆ ಆಗ್ರಹ
ಈ ಕುರಿತು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಹಾಗೂ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತಾನಾಡಿ, ‘ಅತೀ ಹೆಚ್ಚು ಮಳೆಯಾಗಿರುವ ತೋಳೂರು ಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಹಮ್ಮಿಯಾಲ, ಮುಟ್ಟು, ಮುಕ್ಕೋಡ್ಲು, ಕಾಲೂರು, ಗಾಳಿಬೀಡು, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ಬಲ್ಲಮಾವಟಿ, ಕಕ್ಕಬ್ಬೆ ವಿಭಾಗಗಳಿಗೆ ಪಕ್ಷದ ತಂಡ ಭೇಟಿ ನೀಡಿ ಸಮೀಕ್ಷೆ ನಡೆಸಲಿದೆ. ಭಾರೀ ಮಳೆಯಿಂದ ಜಿಲ್ಲೆಯ ಪ್ರಮುಖ ಕೃಷಿಯಾದ ಕಾಫಿಗೆ ಅಪಾರ ಹಾನಿಯಾಗಿದೆ. ಅರೇಬಿಕಾ ಕಾಫಿ ಫಸಲು ಅಧಿಕ ಮಳೆಯಿಂದ ಕೊಳೆತು ಉದುರಿದ್ದರೆ, ರೋಬಸ್ಟಾ ಕಾಫಿಯೂ ಕೊಳೆ ರೋಗದ ಸಮಸ್ಯೆಗೆ ತುತ್ತಾಗಿದ್ದು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಿದ್ದೂ ಜಿಲ್ಲೆಯ ಶಾಸಕರಾಗಲಿ, ಉಸ್ತುವಾರಿ ಸಚಿವರಾಗಲಿ ಕಾಳಜಿ ವಹಿಸಿಲ್ಲವೆಂದು ಆರೋಪಿಸಿದ್ದಾರೆ. ಪ್ರಸ್ತುತ ಪರಿಸ್ಥಿಗಳ ನಡುವೆ ಬೆಳೆಗಾರಿಗೆ ತಲಾ 2 ಲಕ್ಷ ಪರಿಹಾರವನ್ನಾದರೂ ನೀಡಬೇಕೆಂದು ಆಗ್ರಹಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಸತತ 3 ವರ್ಷ ಬೆಳೆಗಾರರಿಗೆ ಪರಿಹಾರ ವಿತರಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ನೀಡಿಲ್ಲ. ಇದೀಗ ಬೆಳೆಹಾನಿ ಸಮೀಕ್ಷಾ ತಂಡವನ್ನು ಜಿಲ್ಲಾಡಳಿತ ರಚಿಸಿದೆ. ಇದು ಸಮೀಕ್ಷೆ ಮಾಡುವುದರ ಒಳಗಾಗಿ ಕೊಳೆತು ಉದುರಿ ಹೋಗಿರುವ ಕಾಫಿ ಕರಗಿ ಹೋಗಿರುತ್ತದೆ. ಆಗ ನಿಖರ ಮಾಹಿತಿ ದೊರೆಯುವುದಿಲ್ಲ. ಆದ್ದರಿಂದ ನಮ್ಮ ಪಕ್ಷದ ನಿಯೋಗ ಸಮೀಕ್ಷೆರ ನಡೆಸುತ್ತಿದ್ದು, ರಾಜ್ಯ, ಕೇಂದ್ರ ಸರ್ಕಾರಕ್ಕೆ ಸಮೀಕ್ಷೆ ವರದಿ ನೀಡಲಾಗುತ್ತದೆ ಎಂದು ವಿವರಿಸಿದ್ರು.

Share This Article