ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

Public TV
2 Min Read

ಇಸ್ಲಾಮಾಬಾದ್: ಏಷ್ಯಾ ಕಪ್‌ನಲ್ಲಿ (Asia Cup 2025) ಭಾರತದ ವಿರುದ್ಧದ ನಿಲುವಿಗಾಗಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಹಾಗೂ ಸಚಿವ ಮೊಹ್ಸಿನ್‌ ನಖ್ವಿಯನ್ನು (Mohsin Naqvi) ಗೌರವಿಸಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.

ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ ನಖ್ವಿ ಅವರ ಕ್ರಮಗಳು ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ, ಈಗ ಅವರನ್ನು ಪಾಕಿಸ್ತಾನದಲ್ಲಿ ಸನ್ಮಾನಿಸಲಾಗುವುದು. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದನ್ನೂ ಓದಿ: ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತ್ತು. ನಂತರ ನಖ್ವಿ ಏಷ್ಯಾ ಕಪ್ ಟ್ರೋಫಿಯನ್ನು ವಿಜೇತರ ಪದಕಗಳ ಜೊತೆಗೆ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು. ವ್ಯಾಪಕ ಟೀಕೆ ಬಳಿಕ ಟ್ರೋಫಿ ಮತ್ತು ಪದಕಗಳನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಲಾಗಿದೆ. ಆದರೆ, ಅವುಗಳನ್ನು ಯಾವಾಗ ಮತ್ತು ಹೇಗೆ ಭಾರತಕ್ಕೆ ತಲುಪಿಸಲಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ.

ಕ್ರಿಕೆಟ್ ವಲಯದಲ್ಲಿ ನಖ್ವಿಯವರ ನಡೆಗೆ ಖಂಡಿಸಿದ್ದರೂ, ಏಷ್ಯಾ ಕಪ್‌ನಲ್ಲಿ ಭಾರತದ ವಿರುದ್ಧ ಇಂತಹ ನಿಲುವನ್ನು ತೆಗೆದುಕೊಂಡಿದ್ದಕ್ಕಾಗಿ ಅವರು ಶಹೀದ್ ಜುಲ್ಫಿಕರ್ ಅಲಿ ಭುಟ್ಟೋ ಎಕ್ಸಲೆನ್ಸ್ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದ್ದು, ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುವುದು ಎಂದು ವರದಿಯಾಗಿದೆ. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

ಸಿಂಧ್ ಮತ್ತು ಕರಾಚಿ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ಗಳ ಅಧ್ಯಕ್ಷ ವಕೀಲ ಗುಲಾಮ್ ಅಬ್ಬಾಸ್ ಜಮಾಲ್ ಅವರು ನಖ್ವಿ ಅವರನ್ನು ಸನ್ಮಾನಿಸಲಾಗುವುದು ಎಂದು ಘೋಷಿಸಿದ್ದಾರೆ. ಭಾರತದೊಂದಿಗೆ ರಾಜಕೀಯ ಮತ್ತು ಕ್ರೀಡಾ ಬಿಕ್ಕಟ್ಟಿನ ಸಮಯದಲ್ಲಿ ನಖ್ವಿಯವರ ಕ್ರಮಗಳು ರಾಷ್ಟ್ರೀಯ ಹೆಮ್ಮೆಯನ್ನು ಪುನಃಸ್ಥಾಪಿಸಿವೆ ಎಂದು ಜಮಾಲ್ ಹೇಳಿದ್ದಾರೆ.

Share This Article