– ನಮ್ಮ ಮೆಟ್ರೋಗೆ ʼಬಸವ ಮೆಟ್ರೋʼ ನಾಮಕರಣಕ್ಕೆ ಮುಂದಾದ ಸಿಎಂ
– ಸಿಎಂ ಹೇಳಿಕೆಯ ಬಗ್ಗೆ ಪರ, ವಿರೋಧ ಚರ್ಚೆ
ಬೆಂಗಳೂರು: ನಮ್ಮ ಮೆಟ್ರೋ (Namma Metro) ಬದಲು ಬಸವ ಮೆಟ್ರೋ (Basava Metro) ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ(CM Siddaramaiah) ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ʼಬಸವ ಮೆಟ್ರೋʼ ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಹೇಳಿದ್ದರು. ಇದನ್ನೂ ಓದಿ: ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!
ನಮ್ಮ ಮೆಟ್ರೋ ಹೆಸರು ಹಾಗೇ ಇರಲಿ ಆದ್ರೆ ಇಂದಿರಾ ಕ್ಯಾಂಟೀನ್ ಬದಲು ಬಸವ ಕ್ಯಾಂಟೀನ್ ಅಂತ change ಮಾಡಿ @MBPatil .
— Shivaraj (@Sportslover_fan) October 6, 2025
ಸಿದ್ದರಾಮಯ್ಯನವರೇ ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ. ಮೆಟ್ರೋಗೆ ಹೆಸರು ಇಡುವುದು ಮುಖ್ಯವಲ್ಲ. ದರ ಇಳಿಸುವುದು ಮುಖ್ಯ. ಭಾರತದ ಯಾವ ಮೆಟ್ರೋದಲ್ಲಿ ಏರಿಸದಷ್ಟು ದರವನ್ನು ಬೆಂಗಳೂರಿನಲ್ಲಿ ಏರಿಸಿದ್ದೀರಿ. ಮೊದಲು ಆ ದರವನ್ನು ಇಳಿಕೆ ಮಾಡಿ ಎಂದು ನೆಟ್ಟಿಗರಿಂದ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನೂ ಓದಿ: ಬಿಪಿಎಲ್ ಕಾರ್ಡ್ದಾರರಿಗೆ ದಸರಾ ಶಾಕ್ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್ ನೋಟಿಸ್!
ಇನ್ನು ಕೆಲವರು ನಮ್ಮ ಮೆಟ್ರೋ ಈಗಾಗಲೇ ಜನಜನಿತವಾಗಿದೆ. ಹೊರ ರಾಜ್ಯದಿಂದ ಬಂದವರು ನಮ್ಮ ಮೆಟ್ರೋ ಎಂದು ಕರೆಯುತ್ತಿದ್ದಾರೆ. ಬಸವಣ್ಣನ ಬಗ್ಗೆ ನಿಮಗೆ ಇಷ್ಟ ಇದ್ದರೆ ನಿಮ್ಮ ಯಾವುದಾದರು ಯೋಜನೆ ಇಡಿ. ಬೇಕಿದ್ದರೆ ಇಂದಿರಾ ಕ್ಯಾಂಟೀನ್ ಬದಲು ಬಸವ ಕ್ಯಾಂಟೀನ್ ಎಂದು ಬದಲಾಯಿಸಿ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಬಸವ ಮೆಟ್ರೋ !!! ತುಂಬಾ ಚೆನ್ನಾಗಿದೆ ಹೆಸರು !! ನಮ್ಮ ಮೆಟ್ರೋ ಅನ್ನು ಬಸವ ಮೆಟ್ರೋ ಅಂತ ಮಾಡಿದರೆ ಒಳ್ಳೆಯದು,
ಯಾರಿಗಾದ್ರೂ ತಕರಾರು ಇದೀಯಾ!!!
ಬಸವನನ್ನು ಗಾಡಿಯಾಗಿ ( ಎತ್ತಿನ ಗಾಡಿ ) ಬಳಸುತ್ತಿದ್ದೆವು, ಬಸವ ಮೆಟ್ರೋ ಅಂತ ಮಾಡೋದ್ರಿಂದ ವಿಶ್ವ ಗುರು ಬಸವಣ್ಣ ಕನ್ನಡದ ಸಾಂಸ್ಕೃತಿಕ ನಾಯಕ ಅಂತ ಹೇಳೋಕೆ ಇದು ಸೂಕ್ತ ಕೂಡ. @siddaramaiah pic.twitter.com/2nYWnLSYlL
— BIDAR Update (@bidarupdates) October 6, 2025
ಇನ್ನು ಕೆಲವರು ಸಿದ್ದರಾಮಯ್ಯನವರ ನಿರ್ಧಾರ ಸರಿಯಾಗಿದೆ. ಕಾಯಕಯೋಗಿ ಬಸವಣ್ಣ ಎಲ್ಲರಿಗೂ ಆದರ್ಶ. ಬಸವ ಮೆಟ್ರೋ ಇಡುವ ನಿರ್ಧಾರ ಸರಿಯಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.