ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ

Public TV
1 Min Read

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

1.20 ಲಕ್ಷ ಶಿಕ್ಷಕರು, ಬೇರೆ 40 ಸಾವಿರ ಸಿಬ್ಬಂದಿ ಗಣತಿಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರಿಗೆ ಇತರೆ ಸರ್ವೆಯವರಿಗೆ 20 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ. ಪ್ರತಿ ಮನೆಗೆ 100 ರೂ. ಕೊಡುತ್ತೇವೆ. ಲಮ್ ಸಮ್ 5 ಸಾವಿರ ರೂ. ಕೊಟ್ಟಿದ್ದೇವೆ ಅಲ್ಲಿಗೆ 20 ಸಾವಿರ ರೂ. ಆಗುತ್ತೆ. 19ರ ಒಳಗೆ ಪೂರ್ಣ ಪ್ರಮಾಣದಲ್ಲಿ ಸರ್ವೆ ಮುಗಿಯಲಿದೆ ಎಂದು ಸಿಎಂ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್‌ ಆರ್.‌ ನಾಯಕ್, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

Share This Article