ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್

1 Min Read
ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್

– ಆರೋಪಿಯನ್ನು ಅರೆಸ್ಟ್ ಮಾಡದೇ ಬಿಟ್ಟುಕಳುಹಿಸಿದ್ದ ಆನೇಕಲ್ ಪೊಲೀಸರು

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು (Anekal Police) ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ:ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ – ಖಾಸಗಿ ಅಂಗ ಮುಟ್ಟಿ ಕ್ರೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಜೊತೆಗೆ ಖಾಸಗಿ ಅಂಗಕ್ಕೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು, ಕೂಡಲೇ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆನೇಕಲ್ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿ ಬಿಟ್ಟು ಕಳುಹಿಸಿದ್ದರು.

ಈ ಸಂಬಂಧ ಕರವೇ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಆನೇಕಲ್ ಇನ್ಸ್‌ಪೆಕ್ಟರ್‌ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ನಡೆದು ಹತ್ತು ದಿನ ಕಳೆದರೂ ಆರೋಪಿಯನ್ನು ಬಂಧನ ಮಾಡಿಲ್ಲ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಆನೇಕಲ್ ಪಟ್ಟಣ ಬಂದ್ ಮಾಡುವ ಎಚ್ಚರಿಕೆ ನೀಡಿದ್ದರು. ಹೋರಾಟಕ್ಕೆ ಮಣಿದ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ:ಹೈದರಾಬಾದ್‌-ಬೆಂಗಳೂರು ಹೆದ್ದಾರಿಯಲ್ಲಿ ಆ್ಯಸಿಡ್‌ ಟ್ಯಾಂಕರ್‌ಗೆ ಸ್ಲೀಪರ್‌ ಬಸ್‌ ಡಿಕ್ಕಿ – ತಪ್ಪಿದ ಭಾರೀ ದುರಂತ!

Share This Article