ಕಾರವಾರ| ಇಷ್ಟಾರ್ಥ ಸಿದ್ಧಿಗಾಗಿ ಅಂದ್ಲೆ ಜಗದೀಶ್ವರಿ ದೇವಿ ಮೊರೆ ಹೋದ ಡಿಸಿಎಂ

1 Min Read

ಕಾರವಾರ: ಇಷ್ಟಾರ್ಥ ಸಿದ್ಧಿಗಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ದೇವಿಯ ಮೊರೆಹೋಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಂದ್ಲೆ ಶ್ರೀ ಜಗದೀಶ್ವರಿ ದೇವಿ ದೇವಸ್ಥಾನಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ, ಹರಕೆ ಸಲ್ಲಿಸಲಿದ್ದಾರೆ.

ಬೆಳಗ್ಗೆ ಬೆಳಗಾವಿಯಿಂದ ಹೆಲಿಕಾಪ್ಟರ್ ಮೂಲಕ ಗೋಕರ್ಣಕ್ಕೆ ಆಗಮಿಸಿ ನಂತರ ಅಂದ್ಲೆಯ ದೇವಾಲಯದಲ್ಲಿ ಅರ್ಚಕ ಗಣಪತಿ ಅವರ ನೇತೃತ್ವದಲ್ಲಿ ಏಕಾಂತದಲ್ಲಿ ಪೂಜಾಕಾರ್ಯ ಮತ್ತು ಪ್ರಸಾದ ರೂಪದ ಫಲ ಕೇಳಲಿದ್ದಾರೆ. ಪೂಜಾ ಕಾರ್ಯದ ಸಮಯದಲ್ಲಿ ಬೆಂಬಲಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಇದನ್ನೂ ಓದಿ: ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ ಫುಲ್‌ ಗರಂ

ಈ ದೇವಾಲಯ ಹರಕೆ ಸಿದ್ಧಿ ಹಾಗೂ ಪ್ರಶ್ನಾ ಫಲಕ್ಕೆ ಪ್ರಸಿದ್ಧಿ ಪಡೆದಿದ್ದು, 2019 ರಲ್ಲಿ ಇಲ್ಲಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ತಮ್ಮ ಮನೋಇಚ್ಛೆ ಪೂರೈಕೆಗಾಗಿ ಏಕಾಂತದಲ್ಲಿ ಮೂರು ತಾಸುಗಳ ಕಾಲ ಪೂಜಾಕಾರ್ಯ ನೆರವೇರಿಸಿದ್ದರು.

ಇದೀಗ ಸರ್ಕಾರದ ಮುಖ್ಯಮಂತ್ರಿ ಸ್ಥಾನದ ಗೊಂದಲದ ನಡುವೆ ಮತ್ತೆ ಈ ಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜಾಕಾರ್ಯ ನೆರವೇರಿಸುತ್ತಿರುವುದು ಸಹಜ ಕುತೂಹಲಕ್ಕೆ ಎಡೆಮಾಡಿದೆ. ಇದನ್ನೂ ಓದಿ: ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ: ವಿಜಯೇಂದ್ರ ಕಿಡಿ

Share This Article