ರಸ್ತೆಬದಿ ನಡೆದುಕೊಂಡು ಹೋಗ್ತಿದ್ದಾಗ ಗುದ್ದಿದ ಸಿಮೆಂಟ್ ಮಿಕ್ಸರ್ ಲಾರಿ – ವ್ಯಕ್ತಿ ಸಾವು

1 Min Read

ಆನೇಕಲ್: ರಸ್ತೆಬದಿ ನಡೆದುಕೊಂಡು ಹೋಗ್ತಿದ್ದ ಪಾದಚಾರಿಗೆ ಸಿಮೆಂಟ್ ಮಿಕ್ಸರ್ ಲಾರಿ ಗುದ್ದಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ (Anekal) ತಾಲೂಕಿನ ಸಿಂಗೇನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

- Advertisement -

ಸಿಂಗೇನ ಅಗ್ರಹಾರ ನಿವಾಸಿ ನಾರಾಯಣಸ್ವಾಮಿ ಮೃತ ದುರ್ದೈವಿ.ಇದನ್ನೂ ಓದಿ: ಪ್ಯಾರಾಗ್ಲೈಡರ್ ಟೇಕಾಫ್‌ ಆದ ಕೆಲಹೊತ್ತಲ್ಲೇ ಅಪಘಾತ; ಪೈಲಟ್ ಸಾವು, ಪ್ರವಾಸಿಗನಿಗೆ ಗಾಯ

- Advertisement -

- Advertisement -

ಶನಿವಾರ (ಡಿ.27) ಸಂಜೆ 7 ಗಂಟೆ ಸುಮಾರಿಗೆ ಮೃತ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ ವ್ಯಕ್ತಿಗೆ ಗುದ್ದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತವಾದರೂ ಲಾರಿಯನ್ನು ನಿಲ್ಲಿಸದೇ ಚಾಲಕ ಹಾಗೆ ತೆರಳಿದ್ದಾನೆ. ಅಪಘಾತದ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

- Advertisement -

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಅತ್ತಿಬೆಲೆ ಪೊಲೀಸ್ (Attibele Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಲವ್-ಸೆಕ್ಸ್ ದೋಖಾ; ಯುವತಿ ಜೊತೆ ಸಲುಗೆ ಬೆಳೆಸಿ 37 ಲಕ್ಷ ವಂಚನೆ – ಆರೋಪಿ ಬಂಧನ

 

Share This Article