ದಾವಣಗೆರೆ: ಗ್ರಾನೈಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಹರಿಹರ ತಾಲೂಕಿನ ಕೋಮರನಹಳ್ಳಿ ಕಣಿವೆಯಲ್ಲಿ ನಡೆದಿದೆ.
ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕ್ಲೀನರ್ ಗೆ ಗಂಭೀರ ಗಾಯಗಳಾಗಿವೆ. ಇವರಿಬ್ಬರು ಹೊಸಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಸದ್ಯ ಕ್ಲೀನರ್ ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾನೈಟ್ ತುಂಬಿಕೊಂಡು ಲಾರಿ ಹೊಸಪೇಟೆ ಕಡೆಯಿಂದ ಶಿವಮೊಗ್ಗ ಕಡೆ ತೆರಳುತ್ತಿತ್ತು, ಓವರ್ ಲೋಡ್ ಆದ ಪರಿಣಾಮ ತಿರುವು ಹಾಗೂ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಘಟನೆ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.