ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

2 Min Read

ಬೀದರ್‌: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ.

ಬೀದರ್‌ನಲ್ಲಿ (Bidar) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಜೆಟ್‌ (Budget 2026) ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್: ಆರ್.ಅಶೋಕ್

ಕೇಂದ್ರ ಸರ್ಕಾರ ನಮ್ಮ 80 ಸಾವಿರ ಕೋಟಿ ರೂ. ಪಾಲನ್ನ ನೀಡಿಲ್ಲ. ಅದರಿಂದಾಗಿ ಸಾಲವಾಗಿದೆ. ಎಎಒ ಯೋಜನೆಯ ಕೇಂದ್ರದ ಪಾಲಾದ 15 ಸಾವಿರ ಕೋಟಿ ರೂ. ನಾವು ಕೊಟ್ಟಿದ್ದೇವೆ. ಪಂಚಾಯಿತಿಗೆ ಕೊಡಬೇಕಾದ 15ನೇ ಹಣಕಾಸಿನ ಪಾಲನ್ನು ಕೂಡಾ ಕೇಂದ್ರ ನೀಡಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ನಾವು ಅನುದಾನ ಕೊಡ್ತಿದ್ದೇವೆ. ನಾವು ಸಾಲ ಮಾಡಿದ್ದನ್ನ ಮಾತ್ರ ಹೇಳ್ತಾರೆ. ಮೋದಿಯವರು 200 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಅವರು ಕೂಡಾ ಸಾಲ ಮಾಡೇ ದೇಶ ನಡೆಸುತ್ತಿದ್ದಾರೆ. ಅದನ್ನು ನಡೆಸಲಿಕ್ಕೆ ಅವರೊಬ್ಬರೇ ಬೇಕಾ? ಬಿಜೆಪಿಯವರ ರೀತಿ ಚಿಕ್ಕಮಕ್ಕಳು ಕೂಡಾ ಮಾತನಾಡಲ್ಲ, ಅವರನ್ನ ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಈ ವರ್ಷ1.32 ಲಕ್ಷ ಕೋಟಿ ಸಾಲ| ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಕೇಂದ್ರ ಸಚಿವ ಕುಮಾರಸ್ವಾಮಿಯವರು (H.D Kumaraswamy) ಫೋನ್‌ ಕದ್ದಾಲಿಕೆ ಆರೋಪ ಮಾಡಿದ್ದ ವಿಚಾರವಾಗಿ, ದಿನ ಅಮಿತ್ ಶಾ ಪಕ್ಕದಲ್ಲೇ ಕೂತ್ಕೋತಾರೆ. ತನಿಖೆ ಮಾಡಲು ಒತ್ತಾಯ ಮಾಡಲಿ. ಸಾಕ್ಷಿಗಳನ್ನು ಕೊಡಲಿ. ಯಾವಾಗ್ಲೂ ಹಿಟ್ ಆಂಡ್ ರನ್ ಮಾಡುವುದು ಅವರಿಗೆ ಘನತೆ ತರುವುದಿಲ್ಲ ಎಂದಿದ್ದಾರೆ.

ಗ್ಯಾರಂಟಿಯಿಂದ ಅಭಿವೃದ್ಧಿಗೆ ಕಡಿತ ಎಂಬ ಬಿಜೆಪಿ ಆರೋಪದ ವಿಚಾರಕ್ಕೆ ಅವರು ಗ್ಯಾರಂಟಿ ಕೊಟ್ಟರೆ ಸಾಮಾಜಿಕ ಬದ್ಧತೆ, ಆರ್ಥಿಕ ಸ್ಥಿರತೆ, ಮಾಸ್ಟರ್ ಸ್ಟ್ರೋಕ್ ಅಂತಾರೆ. ಬಿಹಾರದಲ್ಲಿ 10 ಕೊಟ್ರೆ ಮಾಸ್ಟರ್ ಸ್ಟ್ರೋಕ್, ನಾವು 2 ಸಾವಿರ ಕೊಟ್ರೆ ಇವರಿಗೆ ಸಮಸ್ಯೆ ಆಗುತ್ತೆ. ಗ್ಯಾರಂಟಿಗಳಿಂದ ಯಾವ ಯೋಜನೆ ನಿಂತಿದೆ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ಬಂದಿಲ್ವಾ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಕೊನೆಯ ಬಜೆಟ್ ಎಂಬ ಯತ್ನಾಳ್ ಹೇಳಿಕೆ ವಿಚಾರವಾಗಿ, ಅವರ ಭವಿಷ್ಯ ಅವರಿಗೆ ಗೊತ್ತಿಲ್ಲ, ಅವರ ಪಕ್ಷ ಅವರನ್ನ ಉಚ್ಚಾಟನೆ ಮಾಡೋದು ಅವರಿಗೆ ಗೊತ್ತಿತ್ತಾ? ಮುಂದಿನ ಬಜೆಟ್ ಯಾರು ಮಂಡಿಸ್ತಾರೆ ಎಂಬ ತೀರ್ಮಾನ ಸಿದ್ದರಾಮಯ್ಯನವರು ಇಲ್ಲಾ ಹೈಕಮಾಂಡ್ ತಗೋಬೇಕು. ಸದ್ಯ ಇಬ್ಬರಲ್ಲೂ ಆ ಚರ್ಚೆ ನಡೆದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಜೆಟ್‌| ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಸಾಧ್ಯವೇ?

Share This Article