ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

1 Min Read

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌(DK Shivakumar), ಸಿಎಂ ಸಿದ್ದರಾಮಯ್ಯ (CM Siddaramaiah) ಆಯ್ತು ಈಗ ಕಾಂಗ್ರೆಸ್‌ ಶಾಸಕರೇ ಡಿನ್ನರ್‌ ಮೀಟಿಂಗ್‌ (Dinner Meeting) ಮಾಡಿದ್ದಾರೆ.

ನಗರದ ಖಾಸಗಿ ಹೋಟೆಲಿನಲ್ಲಿ ಮೊದಲ ಬಾರಿ ಗೆದ್ದ 30ಕ್ಕೂ ಹೆಚ್ಚು ಶಾಸಕರು ಡಿನ್ನರ್ ಸಭೆ ನಡೆಸಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಗೆ 4-5 ಹಿರಿಯ ಶಾಸಕರ ಸಾಥ್‌ ನೀಡಿದ್ದಾರೆ.

ಸಂಪುಟ ಪುನಾರಚನೆ ನಡೆದರೆ ತಮ್ಮನ್ನು ಪರಿಗಣಿಸುವಂತೆ ಈ ಹಿಂದೆ ಹೊಸದಾಗಿ ಆಯ್ಕೆಯಾದ ಶಾಸಕರು ಬೇಡಿಕೆ ಇಟ್ಟಿದ್ದರು. ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕೈ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

ಈ ಹಿಂದೆ ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಅಲಂಕರಿಸಿ 6 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕರಿಗೆ ಡಿನ್ನರ್‌ ಕೊಟ್ಟಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯನವರು ನಿನ್ನೆ(ಮಾ.16 ರಂದು) 14 ಮಂದಿ ಶಾಸಕರ ಜೊತೆ ತಮ್ಮ ಕಾವೇರಿ ನಿವಾಸದಲ್ಲಿ ಡಿನ್ನರ್‌ ಸಭೆ ನಡೆಸಿದ್ದರು.
Share This Article