ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

1 Min Read

ರಾಮನಗರ: ಈಗಾಗಲೇ ಮೂರ್ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಸಿಎಂಗೆ ಮನವಿ ಮಾಡಿದ್ದರು. ಹಾಗಾಗಿ ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡಾ ಸಭೆ ಮಾಡಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಹೇಳಿದ್ದಾರೆ.

ಮೊದಲ ಬಾರಿ ಗೆದ್ದ ಶಾಸಕರ ಡಿನ್ನರ್ ಪಾರ್ಟಿ (Dinner Party) ವಿಚಾರ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನೂ ಸಿಎಂ, ಡಿಸಿಎಂಗೆ ತಿಳಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಸುಮಾರು 55 ಮಂದಿ ಸೇರಿ ಊಟ ಮಾಡಿ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಡಿಸಿಎಂ ಡಿಕೆಶಿ ಮೊದಲ ಬಾರಿ ಗೆದ್ದಾಗಲೇ ಸಚಿವರಾದ್ರು. ಪ್ರಿಯಾಂಕ್ ಖರ್ಗೆ ಕೂಡಾ ಮೊದಲ‌ ಬಾರಿ ಗೆದ್ದು ಸಚಿವರಾಗಿದ್ದರು. ಹಾಗಾಗಿ ಈಗಲೂ ಮೊದಲಬಾರಿ ಗೆದ್ದವರಿಗೂ ಅವಕಾಶ ಬೇಕು. ಈ ಎಲ್ಲಾ ವಿಚಾರಗಳನ್ನ ಚರ್ಚೆ ಮಾಡಲಾಗಿದೆ. ನಮ್ಮ ಮನವಿಗೆ ಸಿಎಂ ಸ್ಪಂದಿಸುವ ವಿಶ್ವಾಸ ಇದೆ ಎಂದು ನುಡಿದರು. ಇದನ್ನೂ ಓದಿ: ಗೋ ರಕ್ಷಕ ಚಂದ್ರಶೇಖರ್ @ ಫರ್ಸಾ ವಾಲಾ ಬಾಬಾ ಸಾವು; ದೆಹಲಿ-ಆಗ್ರಾ ಹೈವೇ ಬಂದ್ ಮಾಡಿ ಪ್ರತಿಭಟನೆ

ಇನ್ನೂ ರಂಜಾನ್ ಹಿನ್ನೆಲೆ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಇಕ್ಬಾಲ್ ಹುಸೇನ್, ನಮಾಜ್ ಮಾಡಿ ಮುಸ್ಲಿಂ ಬಾಂಧವರ ಜೊತೆ ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ಮಾತನಾಡಿದ ಅವರು, ರಂಜಾನ್ ಮುಸ್ಲಿಮರ ಪವಿತ್ರ ಹಬ್ಬ. ಒಂದು ತಿಂಗಳ ಉಪವಾಸ ಅಂತ್ಯಗೊಳಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದೇವೆ. ಜಗತ್ತಿನಲ್ಲಿ ಶಾಂತಿ ನೆಲೆಸಲಿ, ಜನರಿಗೆ ನೆಮ್ಮದಿ ದೊರಕಲಿ ಎಂದು ಪ್ರಾರ್ಥಿಸಿದ್ದೇವೆ. ಇರಾನ್-ಇಸ್ರೇಲ್ ಯುದ್ಧದಿಂದ ಸಾಕಷ್ಟು ಅನಾನುಕೂಲ ಆಗುತ್ತಿದೆ. ಗ್ಯಾಸ್ ಸಿಗದೇ ಹೋಟೆಲ್‌ಗಳು ಮುಚ್ಚುತ್ತಿವೆ. ಗೃಹ ಬಳಕೆ ಸಿಲಿಂಡರ್‌ಗೂ ಜನ ಪರದಾಡುವ ಪರಿಸ್ಥಿತಿ ಇದೆ. ಪೆಟ್ರೋಲ್, ಡೀಸೆಲ್ ದರವೂ ಏರಿಕೆ ಆಗುತ್ತಿದೆ. ಇದರಿಂದಾಗಿ ಬೇರೆಬೇರೆ ಉದ್ಯಮದ ಮೇಲೂ ಪರಿಣಾಮ ಬೀರಿದೆ ಎಂದರು. ಇದನ್ನೂ ಓದಿ: ಕಾಶಿ ವಿಶ್ವನಾಥ ದೇವಾಲಯದ ಅರ್ಚಕರಿಂದ ಇಶಾ ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನ

Share This Article