ಮಂಡ್ಯದಲ್ಲಿ ಸಿಲಿಂಡರ್‌ಗೆ ಮುಗಿಬಿದ್ದ ಜನ – ಪೊಲೀಸ್ ರಕ್ಷಣೆಯಲ್ಲಿ ಗ್ಯಾಸ್‌ ಸಿಲಿಂಡರ್ ವಿತರಣೆ

1 Min Read

ಮಂಡ್ಯ: ಗೃಹ ಬಳಕೆ ಸಿಲಿಂಡರ್ (LPG Cylinder) ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಆಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ (Mandya Police) ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಜರುಗಿದೆ.

ಕೆ.ಆರ್ ಪೇಟೆ (KR Pete) ಪಟ್ಟಣದ ಮಂಜುನಾಥ್ ಏಜೆನ್ಸಿ ಎಂದಿನಂತೆ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲು ಗೊಡೋನ್ ಬಾಗಿಲು ತೆರದಿತ್ತು. ಇಂದು ಭಾನುವಾರದ ಕಾರಣ ಏಕಾಏಕಿ ನೂರಾರು ಜನರು ಸಿಲಿಂಡರ್ ತೆಗೆದುಕೊಳ್ಳಲು ಬಂದಿದ್ದಾರೆ. ಈ ವೇಳೆ ಸಿಲಿಂಡರ್ ಎಲ್ಲಿ ಖಾಲಿಯಾಗುತ್ತದೆ ಎಂದು ಬಂದ ನೂರಾರು ಜನರು ಗೊಡೋನ್‌ಗೆ ಮುಗಿಬಿದ್ದರು. ಈ ವೇಳೆ ಏಜೆನ್ಸಿಯವರು ಸಿಲಿಂಡರ್ ವಿತರಣೆ ಮಾಡಲು ಕಷ್ಟವಾಗಿದ್ದು, ಜನರಲ್ಲಿ ನೂಕು ನುಗ್ಗಲು ಉಂಟಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ʻಗ್ಯಾಸ್ ಟ್ರಬಲ್‌ʼ – ಮಾಂಸಹಾರಿ ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

ಬಳಿಕ ಏಜೆನ್ಸಿ ಮಾಲೀಕರು ಕೆ.ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಸಿಲಿಂಡರ್ ಲಾರಿಯನ್ನ ನಿಲ್ಲಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಯಿತು. ಆಗಲೂ ಸಹ ಎಲ್ಲಿ ಸಿಲಿಂಡರ್ ಖಾಲಿಯಾಗುತ್ತೆ ಎಂಬ ಆತಂಕದಲ್ಲಿ ಜನರು ಮುಗಿ ಬಿದ್ದರು. ಆಗ ಪೊಲೀಸರು ಅವರುಗಳಿಗೆ ಬೈದು ಸರದಿ ಸಾಲಲ್ಲಿ ನಿಲ್ಲಿಸಿ ಸಿಲಿಂಡರ್ ವಿತರಿಸಲಾಯಿತು. ಇದನ್ನೂ ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ 

Share This Article