ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

1 Min Read

ಹಾಸನ: ಜಿಲ್ಲೆಯ (Hassan) ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಹಾಸನ, ಸಕಲೇಶಪುರದ (Sakleshpura) ಹಲವೆಡೆ ಗುಡುಗು, ಮಿಂಚು ಸಹಿತ ಮಳೆ (Rain) ಸುರಿಯುತ್ತಿದೆ. ಸಕಲೇಶಪುರ ತಾಲೂಕಿನ ಹರಗರಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದಿದ್ದು, ಓರ್ವಳ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕುಂದರಗಿ ಗ್ರಾಮದ ರೂಪ, ಸುಮಿತ್ರ ಮತ್ತು ಜಯಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ರೂಪ ಅವರ ಸ್ಥಿತಿ ಗಂಭೀರವಾಗಿದೆ. ಈ ಮೂವರು ಗ್ರಾಮದ ದೀನಹಳ್ಳಿ ಕಾಫಿ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಇದನ್ನೂ ಓದಿ: ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Share This Article