ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

1 Min Read

ಕಲಬುರಗಿ: ಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ಬಜೆಟ್ ಮಂಡನೆಗೂ ಮುನ್ನ ಇರಾನ್ ಪರಮೋಚ್ಚ ನಾಯಕ ಅಯೊತೊಲ್ಲಾ ಖಮೇನಿ ಹತ್ಯೆಗೆ ಸಂತಾಪ ಸೂಚಿಸಿದ್ದಾರೆ.

ಕಲಬುರಗಿ ನಗರದ ಟೌನ್‌ನಲ್ಲಿರುವ ಪಾಲಿಕೆಯ ಕಟ್ಟಡದಲ್ಲಿ ಇಂದು ಮಹಾನಗರ ಪಾಲಿಕೆ ಬಜೆಟ್ ಮಂಡನೆಯಿತ್ತು. ಈ ವೇಳೆ ಬಜೆಟ್ ಮಂಡನೆಗೂ ಮುನ್ನ ವಾರ್ಡ್ ನಂಬರ್ 24ರ ಸದಸ್ಯೆ ಸಯೀದಾ ನೂರ್ ಫಾತೀಮಾ ಜೈದಿ ಅವರು ಇರಾನ್ ಪರಮೋಚ್ಚ ನಾಯಕ ಅಯೊತೊಲ್ಲಾ ಖಮೇನಿ ಹತ್ಯೆಗೆ ಸಂತಾಪ ಸೂಚಿಸುವ ನಿರ್ಣಯ ಮಂಡಿಸಿದ್ದಾರೆ. ಇದನ್ನೂ ಓದಿ: ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

ನಿರ್ಣಯ ಮಂಡನೆ ಬೆನ್ನಲ್ಲೇ ಪಾಲಿಕೆ ಮೇಯರ್, ಆಯುಕ್ತರು ಸೇರಿ ಬಿಜೆಪಿ ಕಾಂಗ್ರೆಸ್ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Share This Article