ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

0 Min Read

ಚೆನ್ನೈ: ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ನಿರಾಸೆಯಾಗಿದೆ. ಚೆನ್ನೈ ವಿರುದ್ಧ ಪಂಜಾಬ್‌ 5 ವಿಕೆಟ್‌ಗಳ ಜಯ ಗಳಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿ ಗೆಲುವಿನ ನಗೆ ಬೀರಿದೆ.

ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮನೆ ಮಾತಾಗಿರುವ ಸಂಜು ಸ್ಯಾಮ್ಸನ್‌ ಐಪಿಎಲ್‌ನಲ್ಲಿ ನಿರಾಸೆ ಮೂಡಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ಔಟಾದರು. ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ 28 ರನ್‌ ಗಳಿಸಿದರು. ಈ ಮಧ್ಯೆ ಯುವಕ ಆಯುಷ್‌ ಮ್ಹಾತ್ರೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ತಂಡ ಬೃಹತ್‌ ಮೊತ್ತ ಪೇರಿಸಲು ನೆರವಾದರು. ಆಯುಷ್‌ 43 ಬಾಲ್‌ಗೆ 6 ಫೋರ್‌ ಮತ್ತು 5 ಸಿಕ್ಸರ್‌ನೊಂದಿಗೆ 73 ರನ್‌ ಗಳಿಸಿದರು.

ಶಿವಂ ದುಬೆ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 27 ಬಾಲ್‌ಗೆ 45 ರನ್‌ ಸೇರಿಸಿದರು. ಸರ್ಫರಾಜ್‌ ಖಾನ್‌ 32 ರನ್‌ ಗಳಿಸಿದರು. ಅಂತಿಮವಾಗಿ ಚೆನ್ನೈ ತಂಡ 5 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತು.

210 ರನ್‌ಗಳ ಗುರಿ ಬೆನ್ನತ್ತಿದ ಶ್ರೇಯಸ್‌ ಪಡೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿತು. ಪ್ರಿಯಾಂಶ್‌ ಆರ್ಯ 39, ಪ್ರಭು ಸಿಮ್ರಾನ್‌ 43, ಕೂಪರ್ ಕಾನೋಲಿ 36 ಹಾಗೂ ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ ಅರ್ಧಶತಕದ ಜವಾಬ್ದಾರಿಯುತ ಆಟವಾಡಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

Share This Article