ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

1 Min Read

ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು (Swimming) ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಯುವಕನ ಶವಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದರು. ನದಿಗೆ ಇಳಿದಿದ್ದ ಕೆಲವೇ ಅಡಿಯ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ.

ಮೃತನನ್ನು ತೀರ್ಥಹಳ್ಳಿ (Thirthahalli) ತಾಲೂಕಿನ ಸೀಬಿನಕೆರೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಏ.7ರ ಸಂಜೆ ಕಲ್ಲು ಬಂಡೆ ಮೇಲೆ ಮೊಬೈಲ್, ಚಪ್ಪಲಿ, ಬಟ್ಟೆಯನ್ನು ಇಟ್ಟು ಈಜಲು ಹೋಗಿ ಕಣ್ಮರೆಯಾಗಿದ್ದ. ಇದನ್ನೂ ಓದಿ: ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

ಯುವಕನ ಶವವನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Share This Article