ಬೀದರ್/ಕಲಬುರಗಿ: ಏ.11ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೀದರ್ (Bidar) ಹಾಗೂ ಕಲಬುರಗಿ (Kalaburagi) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಏ.11ರಂದು ಬೀದರ್ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್ನಿಂದ ಕಲಬುರಗಿಗೆ ತೆರಳಲಿದ್ದಾರೆ. ಇದನ್ನೂ ಓದಿ: ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ
ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

