ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ (Ballot Paper) ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಸಹಿ ಹಾಕಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ (EVM) ಬದಲಿಗೆ ರಾಜ್ಯ ಚುನಾವಣಾ ಆಯೋಗ ಮತಪತ್ರಗಳನ್ನು(Karnataka State Election Commission) ಬಳಸಲಿದೆ. ಇದನ್ನೂ ಓದಿ: ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ
2015 ರಲ್ಲಿ ಮೊದಲ ಬಾರಿಗೆ ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ ಬಳಸಲಾಗಿತ್ತು. ಈಗ ಒಂದು ದಶಕದ ನಂತರ ಮತ್ತೆ ಮತಪತ್ರಗಳ ಚುನಾವಣೆಗೆ ಕರ್ನಾಟಕ ಮರಳಿದೆ.

