ಚೆನ್ನೈ: ತಮಿಳುನಾಡಿನ (Tamil Nadu) ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker Factory) ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ಮಧ್ಯಾಹ್ನ ವಿರುಧುನಗರ(Virudhunagar) ಜಿಲ್ಲೆಯ ಕಟ್ಟನಾರ್ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ.
ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
#WATCH | Tamil Nadu: A massive explosion occurred at a firecracker factory in Kattanarpatti near Virudhunagar. 16 people died and 6 were injured; visuals from the spot
(Video source: Fire and Rescue Department) https://t.co/Ue6GyKMYBy pic.twitter.com/tGPYxZf1Yw
— ANI (@ANI) April 19, 2026
ಪ್ರಾಥಮಿಕ ತನಿಖೆಯ ಪ್ರಕಾರ, ಪಟಾಕಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ಸಂಭವಿಸಿದ ಘರ್ಷಣೆಯಿಂದ ಈ ಭೀಕರ ಸ್ಫೋಟ ಸಂಭವಿಸರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?
ಈ ಘಟಕ ಸುಮಾರು 150 ಕಾರ್ಮಿಕರನ್ನು ಹೊಂದಿತ್ತು. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಸಾಮಾನ್ಯವಾಗಿ ಭಾನುವಾರ ಈ ಕಾರ್ಖಾನೆಗೆ ರಜೆ ನೀಡಲಾಗುತ್ತಿತ್ತು. ಆದರೆ ವಿಧಾನಸಭಾ ಚುನಾವಣೆಗಾಗಿ ಏಪ್ರಿಲ್ 23 ರಂದು ರಜೆ ನೀಡಬೇಕಾಗಿರುವುದರಿಂದ ಇಂದು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಷ್ಟು ಸಂಖ್ಯೆಯ ಕಾರ್ಮಿಕರು ಇಂದು ಕೆಲಸಕ್ಕೆ ಹಾಜರಾಗಿದ್ದರು ಎನ್ನುವುದು ತಿಳಿದು ಬಂದಿಲ್ಲ.
Tamil Nadu CM MK Stalin tweets, “…My deepest condolences to the families of those who lost their lives. I have requested the Ministers K.K.S.S.R. Ramachandran and Thangam Thennarasu to rush to the scene immediately to expedite and monitor the rescue operations…” pic.twitter.com/cp4ABPgCL0
— ANI (@ANI) April 19, 2026
ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಲು ಸಚಿವರಾದ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ಮತ್ತು ತಂಗಂ ತೆನ್ನರಸು ಅವರನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.
ನಿರ್ಲಕ್ಷ್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಕಾರ್ಖಾನೆಯ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಕೂಡಲೇ ಮಾಲೀಕರು ತಲೆಮರೆಸಿಕೊಂಡಿದ್ದು, ಪೊಲೀಸರು ಈಗ ಶೋಧ ನಡೆಸುತ್ತಿದ್ದಾರೆ.

