ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

5 Min Read

ಕಳೆದ ವರ್ಷ ಜಮ್ಮು & ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahaglam) ನಡೆದ ಭಯೋತ್ಪಾದಕರ ಹಿಂದೂಗಳ ನರಮೇಧದಲ್ಲಿ ಮೂವರು ಕನ್ನಡಿಗರು ಸೇರಿ ಒಟ್ಟು 26 ಜನರು ಬಲಿಯಾಗಿದ್ದು, ಆ 26 ಮಂದಿ ಯಾರು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಮೆರಿಕ ಮೂಲದ ಟಿಸಿಎಸ್ ಟೆಕ್ಕಿ ಬಿತನ್, ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಸೇರಿದಂತೆ ಒಟ್ಟು 26 ಜನರ ಹೆಸರನ್ನ ಅಧಿಕಾರಿಗಳು ಬಿಡುಗಡೆಗೊಳಿದ್ದರು.

ಅಮೆರಿಕ ಮೂಲದ ಕೋಲ್ಕತ್ತಾದ ಟೆಕ್ಕಿ, ಬಿಹಾರದ ಅಬಕಾರಿ ಇನ್ಸ್ಪೆಕ್ಟರ್, ಕರ್ನಾಟಕದ ರಿಯಲ್ ಎಸ್ಟೇಟ್ ಏಜೆಂಟ್, ಒಡಿಶಾದ ಅಕೌಂಟೆಂಟ್, ನೌಕಾಪಡೆಯ ಅಧಿಕಾರಿಯೊಬ್ಬರು ತಮ್ಮ ಕುಟುಂಬಗಳೊಂದಿಗೆ ಪಹಲ್ಗಾಮ್‌ ನ ಸುಂದರ ದೃಶ್ಯವನ್ನು ಆನಂದಿಸುತ್ತಿದ್ದಾಗ ಪೈಶಾಚಿಕ ದಾಳಿಗೆ ಬಲಿಯಾದರು.

pahalgam attack

ಮೃತರ ಪೈಕಿ ಮಹಾರಾಷ್ಟ್ರದ ಅತುಲ್, ಸಂಜಯ್, ಸಂತೋಷ್, ಕೌಸ್ತುಭ, ಮುಂಬೈನ ಹೆಮಂತ್‌ಮ ದಿಲೀಪ್, ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಿತಾನ್, ಸಮೀರ್, ಉತ್ತರಾಖಂಡದ ನೀರಜ್, ಹರಿಯಾಣದ ವಿನಯ್ ನಾರ್ವೆಲ್, ಉತ್ತರ ಪ್ರದೇಶದ ಶುಭಂ, ಬಿಹಾರದ ಮನೀಶ್, ಪಂಜಾಬ್‌ನ ದಿನೇಶ್, ಕೇರಳದ ರಾಮಚಂದ್ರ, ಗುಜರಾತ್‌ನ ಸುಮೀತ್, ಯತೀಶ್, ಶೈಲೇಶ್‌ಬಾಯ್, ಕರ್ನಾಟಕದ ಭರತ್ ಭೂಷಣ್, ಮಧುಸೂದನ್, ಮಂಜುನಾಥ್ ರಾವ್, ಒಡಿಶಾದ ಪ್ರಶಾಂತ್, ಪಹಲ್ಗಾಮ್‌ನ ಸೈಯದ್ ಆದಿಲ್ ಹಸೇನ್, ನೇಪಾಳದ ಸುದೀಪ್, ಆಂಧ್ರಪ್ರದೇಶ ವಿಶಾಖಪಟ್ಟಂನ ಸಚಂದ್ರ, ಅರುಣಾಚಲ ಪ್ರದೇಶದ ತೇಜ್ ಹೈಲ್ಯಾಂಗ್, ಮಧ್ಯಪ್ರದೇಶ ಇಂದೋರ್‌ನ ಸುಶೀಲ್ ಸಾವನ್ನಪ್ಪಿದ್ದರು.

ಹರಿಯಾಣದ ನೌಕಾಪಡೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್:
ಮೃತರಲ್ಲಿ ಹರಿಯಾಣದ ಕರ್ನಾಲ್‌ನ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೂಡ ಒಬ್ಬರಾಗಿದ್ದರು. ದಾಳಿ ನಡೆಯುವುದಕ್ಕೆ ಸರಿಯಾಗಿ ಕೇವಲ 4 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ತಮ್ಮ ಪತ್ನಿಯೊಂದಿಗೆ ಹನಿಮೂನ್‌ಗೆ ಹೋಗಿದ್ದಾಗ ಈ ದುರಂತ ನಡೆದುಹೋಯಿತು. ನಾವು ಭೇಲ್ಪುರಿ ತಿನ್ನುತ್ತಿದ್ದೆವು, ಆ ಸಮಯದಲ್ಲಿ ಬಂದೂಕುಧಾರಿಯೊಬ್ಬರು ಬಂದು, ನನ್ನ ಗಂಡ ಮುಸ್ಲಿಂ ಅಲ್ಲ ಎಂದು ತಿಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಿದರು ಎಂದು ವಿನಯ್ ಪತ್ನಿ ಹಿಮಾಂಶಿ ಪ್ರತ್ಯಕ್ಷ ಘಟನೆ ಬಿಚ್ಚಿಟ್ಟಿದ್ದರು.

Pahalgam terror attack vinay narvel 1

ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್:
ದಾಳಿಯಲ್ಲಿ ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಮತ್ತು ಬಂಗಾಳದ ಪುರುಲಿಯಾ ಜಿಲ್ಲೆಯ ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್ ಕೂಡ ಸಾವನ್ನಪ್ಪಿದ್ದರು. ಕೆಲ ದಿನಗಳ ಹಿಂದಷ್ಟೇ ಹೈದರಾಬಾದ್‌ಗೆ ನಿಯೋಜನೆಗೊಂಡಿದ್ದ ರಂಜನ್, ಕುಟುಂಬ ಸಮೇತ ಜಮ್ಮು ಮತ್ತು ಕಾಶ್ಮೀರದಲ್ಲಿ ರಜೆ ಕಳೆಯುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು.

Pahalgam terror attack manish ranjan

ಕರ್ನಾಟಕದ ಮೂವರು:
ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡರು. 4-5 ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಆ ದಿನ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಅಷ್ಟರಲ್ಲೇ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಯಿತು.

ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಬಲಿಯಾದರು. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ದಾಳಿ ನಡೆಯುವುದಕ್ಕೆ ಸರಿಯಾಗಿ 2 ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು.

pahalgam terror attack Bharath Bushan

ಮಂಜುನಾಥ್ ರಾವ್ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದವರು. ಅವರ ತಂದೆ ಶಿವಮೊಗ್ಗದ ಮ್ಯಾಮ್ ಕೋಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದರು. ದಾಳಿಗೆ ಮೂರು ದಿನಗಳ ಹಿಂದೆ ಮಂಜುನಾಥ್ ರಾವ್ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಮಗನ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ 6 ದಿನಗಳ ಪ್ಯಾಕೇಜ್ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್ ಏ.24ರಂದು ವಾಪಸ್ ಬರುವುದಾಗಿ ಹೇಳಿದ್ದರು. ಆದ್ರೆ ದುರದೃಷ್ಟವಶಾತ್ ಉಗ್ರರ ಗುಂಡಿಗೆ ಬಲಿಯಾದರು.

pahalgam terror attack madhusudhan

ಮಹಾರಾಷ್ಟ್ರದ ಸಂತೋಷ್ ಜಗದಾಳೆ & ಕೌಸ್ತುಭ್ ಗನ್ಬೋಟೆ:
ಮಹಾರಾಷ್ಟ್ರದ ಪುಣೆಯ ಉದ್ಯಮಿಗಳಾದ ಸಂತೋಷ್ ಜಗದಾಳೆ ಮತ್ತು ಕೌಸ್ತುಭ್ ಗನ್ಬೋಟೆ ಕುಟುಂಬ ಸಮೇತ ಮಂಗಳವಾರ ಪಹಲ್ಗಾಮ್‌ಗೆ ತೆರಳಿದ್ದರು. ಅದೇ ದಿನ ವಿಧಿ ಅವರಿಬ್ಬರನ್ನು ಗುಂಡಿನ ದಾಳಿಯಲ್ಲಿ ಬಲಿ ಪಡೆದುಕೊಂಡಿತು.

pahalgam terror attack manjunath

ಒಡಿಶಾದ ಪ್ರಶಾಂತ್ ಸತ್ಪತಿ:
ಒಡಿಶಾದ ಬಾಲಸೋರ್‌ನ ಮೂಲದವರಾದ ಪ್ರಶಾಂತ್ ಸತ್ಪತಿ ಎಂಬುವವರು ತಮ್ಮ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದರು. ಈ ವೇಳೆ ಗುಂಡಿನ ದಾಳಿಗೆ ಸಾವನ್ನಪ್ಪಿದರು.

ಪಶ್ಚಿಮ ಬಂಗಾಳದ ಇಬ್ಬರು
ಅಮೆರಿಕ ಮೂಲದ ಕೋಲ್ಕತ್ತಾದ ಬೈಷ್ಣಬ್ಘಾಟಾ ನಿವಾಸಿಯಾಗಿರುವ ಟಿಸಿಎಸ್ ಟೆಕ್ಕಿ ಬಿತನ್ ಅಧಿಕಾರಿ ತಮ್ಮ ಅಮೆರಿಕದಿಂದ ಹಿಂದಿರುಗಿ ತಮ್ಮ ಪತ್ನಿ ಸೋಹಿನಿ ಅಧಿಕಾರಿ (37) ಮತ್ತು ಅವರ ಮೂರುವರೆ ವರ್ಷದ ಮಗ ಹೃದಾನ್ ಅಧಿಕಾರಿಯೊಂದಿಗೆ ಪಹಲ್ಗಾಮ್ ತೆರಳಿದ್ದರು. ಈ ವೇಳೆ ದಾಳಿಯಲ್ಲಿ ಪ್ರಾಣ ಕಳೆದುಕೊಂಡರು. ಕಳೆದ ವರ್ಷ ಏ.16 ರಿಂದ ಏ.24ರ ವರೆಗೆ ಕಾಶ್ಮೀರ ಪ್ರವಾಸದ ಯೋಜನೆ ಹಾಕಿಕೊಂಡಿದ್ದರು.

Pahalgam terror attack kaustub

ಕೋಲ್ಕತ್ತಾ ನಿವಾಸಿ ಸಮೀರ್ ಗುಹಾ ಅವರು ಕೇಂದ್ರದ ಅಂಕಿಅಂಶ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಈ ದಾಳಿ ನಡೆದಿತ್ತು.

Pahalgam terror attack santosh jagadale

ಉತ್ತರ ಪ್ರದೇಶದ ಶುಭಂ ದ್ವಿವೇದಿ:
ಪಹಲ್ಗಾಮ್ ದಾಳಿಗೂ ಮುಂಚೆ ಶುಭಂ ಮತ್ತು ಅವರ ಪತ್ನಿ ಮ್ಯಾಗಿ ತಿನ್ನುತ್ತಿದ್ದರು. ಈ ವೇಳೆ ಸಮವಸ್ತ್ರದಲ್ಲಿದ್ದ ಇಬ್ಬರು ಪುರುಷರು ಅವರ ಬಳಿಗೆ ಬಂದು, ನೀವು ಮುಸ್ಲಿಮರಾ ಎಂದು ಕೇಳಿದರು. ಬಳಿಕ ಇಸ್ಲಾಮಿಕ್ ನಂಬಿಕೆಯ ಘೋಷಣೆಯಾದ ಕಲೀಮಾ ಪಠಿಸುವಂತೆ ಒತ್ತಾಯಿಸಿದರು. ದಾಳಿ ನಡೆಯುವುದಕ್ಕೆ ಸರಿಯಾಗಿ 2 ತಿಂಗಳ ಹಿಂದೆ ಶುಭಂ ಮದುವೆಯಾಗಿ ಪ್ರವಾಸಕ್ಕೆ ಹೋಗಿದ್ದ ಶುಭಂ ಘೋರ ದುರಂತದಲ್ಲಿ ಪ್ರಾಣ ಕಳೆದುಕೊಂಡರು.

Pahalgam terror attack

ಗುಜರಾತ್‌ನ ಮೂವರು:
ಭಯೋತ್ಪಾದಕ ದಾಳಿಯಲ್ಲಿ ಗುಜರಾತ್‌ನ ಭಾವನಗರದ ಯತೀಶ್‌ಭಾಯ್ ಮತ್ತು ಅವರ ಮಗ ಸ್ಮಿತ್ ಸಾವನ್ನಪ್ಪಿದರು. ಇನ್ನೂ ಗುಜರಾತ್‌ನ ಸೂರತ್‌ನವರಾದ ಶೈಲೇಶ್ ಕಲ್ಥಿಯಾ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬ ಆಚರಿಸಲು ಕಾಶ್ಮೀರಕ್ಕೆ ತೆರಳಿದ್ದರು. ಕುದುರೆ ಸವಾರಿ ಮಾಡುತ್ತಿದ್ದಾಗ ಕುಟುಂಬದ ಮುಂದೆಯೇ ದಾಳಿಗೀಡಾದರು.

Pahalgam terror attack shubam

ನೇಪಾಳದ ಸುದೀಪ್:
ಪಹಲ್ಗಾಮ್ ದಾಳಿಯಲ್ಲಿ ನೇಪಾಳ ಮೂಲದ ಸುದೀಪ್ ಎಂಬುವವರು ಸಾವನ್ನಪ್ಪಿದರು. ಸುದೀಪ್ (27) ಕುಟುಂಬದಲ್ಲಿ ಒಬ್ಬನೇ ಮಗ. ಬುತ್ವಾಲ್‌ನಲ್ಲಿರುವ ಮಾಡರ್ನ್ ಸೊಸೈಟಿ ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು.

Pahalgam terror attack yashbai and son

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿತು. ಭಯೋತ್ಪಾದಕರು ಪ್ರವಾಸಿಗರ ಗುರುತಿನ ಚೀಟಿಗಳನ್ನ ಪರಿಶೀಲಿಸಿ, ಮುಸ್ಲಿಮೇತರರೆಂದು ಗುರುತಿಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

Pahalgam terror attack sudeep

Share This Article