ರಾಜ್ಯದ ಹವಾಮಾನ ವರದಿ 28-04-2026

1 Min Read

ರಾಜ್ಯದಲ್ಲಿ ಹಲವು ದಿನಗಳಿಂದ ಜನರು ಮಳೆಗಾಗಿ ಕಾಯುತ್ತಿದ್ದಾರೆ. ಇನ್ನೂ ಹಲವು ಕಡೆ ಭಾರೀ ಮಳೆಯಿಂದ ಬೆಳೆ ನಾಶ ಆಗಿದೆ. ಇದೆಲ್ಲದರ ನಡುವೆ ಹವಾಮಾನ ಇಲಾಖೆ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮೈಸೂರು, ಧಾರವಾಡ, ಹಾವೇರಿ, ದಾವಣಗೆರೆ, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 36-23
ಮಂಗಳೂರು: 33-27
ಶಿವಮೊಗ್ಗ: 35-23
ಬೆಳಗಾವಿ: 35-22
ಮೈಸೂರು: 36-23

ಮಂಡ್ಯ: 36-24
ಮಡಿಕೇರಿ: 29-21
ರಾಮನಗರ: 37-24
ಹಾಸನ: 33-21
ಚಾಮರಾಜನಗರ: 36-23
ಚಿಕ್ಕಬಳ್ಳಾಪುರ: 36-23

ಕೋಲಾರ: 36-23
ತುಮಕೂರು: 36-23
ಉಡುಪಿ: 33-27
ಕಾರವಾರ: 31-28
ಚಿಕ್ಕಮಗಳೂರು: 32-20
ದಾವಣಗೆರೆ: 36-24

ಹುಬ್ಬಳ್ಳಿ: 36-24
ಚಿತ್ರದುರ್ಗ: 36-23
ಹಾವೇರಿ: 35-24
ಬಳ್ಳಾರಿ: 38-27
ಗದಗ: 37-24
ಕೊಪ್ಪಳ: 38-26

ರಾಯಚೂರು: 39-28
ಯಾದಗಿರಿ: 40-29
ವಿಜಯಪುರ: 40-26
ಕಲಬುರಗಿ: 41-28
ಬಾಗಲಕೋಟೆ: 39-26

Share This Article