ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

1 Min Read

ಚಿಕ್ಕಮಗಳೂರು: ಶೃಂಗೇರಿ (Sringeri) ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ (BJP) ಅಭ್ಯರ್ಥಿ ಡಿ.ಎನ್‌ ಜೀವರಾಜ್ (D.N Jeevaraj) ಅವರಿಗೆ ಚುನಾವಣಾ ಅಧಿಕಾರಿ ಗೌರವ್ ಕುಮಾರ್ ಶೆಟ್ಟಿ ಪ್ರಮಾಣ ಪತ್ರ ನೀಡಿದರು.

ಈ ಬಗ್ಗೆ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ಜನ ನನ್ನನ್ನು ಗೆಲ್ಲಿಸಿದ್ದರು. ಆದರೆ ಇಲ್ಲಿಯ ಕೆಲವರು ಸೋಲಿಸಿದ್ದರು. ಕಾನೂನಿನ ಹೋರಾಟದ ಮೂಲಕ ನನಗೆ ಜಯಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ಟ್ಯಾಂಪರಿಂಗ್ ಆರೋಪದಡಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ಠಾಣ ವ್ಯಾಪ್ತಿಗೆ ಬರುವುದಿಲ್ಲ. ಆಯೋಗ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್‌ನವರೆ ಮಾಡಿದ್ದಾರೆ. ಇವರ ಸರ್ಕಾರದಲ್ಲೇ ಇದ್ದ ಮತಗಳು ಟ್ಯಾಂಪರಿಂಗ್ ಆಗೋಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಅಂಚೆ ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಅಂಚೆ ಮತ ಬಿದ್ದಿತ್ತು. ಈಗ ನಡೆದ ಮರು ಎಣಿಕೆಯಲ್ಲಿ‌ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ (T.D.Raje Gowda) ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಈ ಮೂಲಕ ಅಂಚೆ ಮತಗಳ ಮರು ಎಣಿಕೆಯಲ್ಲಿ 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಮೇಲುಗೈ ಸಾಧಿಸಿದ್ದಾರೆ. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

Share This Article