ಧರಂ ಸಿಂಗ್ ನಿಧನ: ಇಂದು ಮಧ್ಯಾಹ್ನದಿಂದ ಶಾಲಾ ಕಾಲೇಜುಗಳಿಗೆ ರಜೆ

Public TV
1 Min Read

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ಇಂದು ಮಧ್ಯಾಹ್ನದಿಂದ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಶುಕ್ರವಾರ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಶೋಕಾಚರಣೆ ನಡೆಸಲು ತೀರ್ಮಾನಿಸಿದೆ.

ಶೋಕಾಚರಣೆ ನಡೆಯುವ ಕಾರಣ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ಬಾವುಟ ಅರ್ಧಕ್ಕೆ ಹಾರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಸೇರ್ಪಡೆಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *