18 ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಐದು ಮಂದಿ ಅರೆಸ್ಟ್

Public TV
0 Min Read

ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರದಲ್ಲಿ ಕಸಾಯಿಖಾನೆಗೆ ಸಾಗಿಸುತಿದ್ದ 18 ಜಾನುವಾರುಗಳನ್ನ ಸಾಗಾಟ ಮಾಡುತ್ತಿದ್ದ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕೋಲ ಮೂಲದ ರಾಘವೇಂದ್ರ ನಾಯ್ಕ್, ಸುರೇಶ್, ಶಿರಗುಂಜಿಯ ಬೊಮ್ಮಯ್ಯ, ಬೀರಯ್ಯ, ದೇವದಾಸ್ ನಾಯ್ಕ್ ಎಂಬವರು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು. ಧಾರವಾಡ ಜಿಲ್ಲೆಯ ಕಲಘಟಗಿಯಿಂದ ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ವೇಳೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಐವರಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಮಹೇಂದ್ರ ಪಿಕಪ್ ಹಾಗೂ 1.60 ಲಕ್ಷ ರೂ. ಮೌಲ್ಯದ 15 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *