ಆಟೋ, ಖಾಸಗಿ ಬಸ್ ನಡುವೆ ಡಿಕ್ಕಿ: ನಾಲ್ವರು ಸಾವು, ಇಬ್ಬರಿಗೆ ಗಾಯ

Public TV
1 Min Read

ಶಿವಮೊಗ್ಗ: ತುಮಕೂರು ಜಿಲ್ಲೆಯ ಸಿರಾದಿಂದ ಸಿಗಂದೂರಿನ ಚೌಡೇಶ್ವರಿ ದೇವಿಯ ದರ್ಶನ ಪಡೆದು ವಾಪಸ್ ಬರುವಾಗ ಆಟೋ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಇಬ್ಬರಿಗೆ ಗಾಯವಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಆಚಾಪುರದಲ್ಲಿ ಈ ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ತುಮಕೂರಿನ ಶಿರಾ ತಾಲೂಕಿನ ಭುವನಹಳ್ಳಿ-ಸುರಗಂಟೆ ಗ್ರಾಮದಿಂದ ಸಿಗಂದೂರಿನ ದೇವಸ್ಥಾನಕ್ಕೆ ಒಂದೇ ಆಟೋದಲ್ಲಿ ಏಳು ಜನ ಬಂದಿದ್ದರು. ಸಿಗಂದೂರಿನಿಂದ ಚೌಡೇಶ್ವರಿ ದೇವಿಯ ದರ್ಶನ ಪಡೆದು ವಾಪಸ್ ಬರುವಾಗ ಎದುರಿಗೆ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಈ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *