ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

Public TV
1 Min Read

 

ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ.

ರಾಜ್ಯಸಭೆಯಲ್ಲಿ ಜಡಿಯು 10 ಸದಸ್ಯರನ್ನ ಹೊಂದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದಿದ್ದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ ಕಾರಣ ಕಳೆದ ರಾತ್ರಿ ಪಕ್ಷದ ರಾಜ್ಯಸಭಾ ಸದಸ್ಯ ಅನಿಲ್ ಅನ್ವರ್ ಅನ್ಸಾರಿ ಅವರನ್ನ ಅಮಾನತು ಮಾಡಲಾಗಿತ್ತು.

ಬಿಜಾರದಲ್ಲಿ ಕಳೆದ ತಿಂಗಳು ನಿತೀಶ್ ಕುಮಾರ್ ಸರ್ಕಾರ ರಚಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಅವರ ನಡುವೆ ಅಂತರ ಶುರುವಾಗಿತ್ತು.

ಸದ್ಯ ಬಿಹಾರ ಪ್ರವಾಸದಲ್ಲಿರುವ ಶರದ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಇನ್ನೂ ಆರ್‍ಜೆಡಿ ಹಾಗೂ ಕಾಂಗ್ರೆಸ್ ಮಹಾಮೃತ್ರಿಯ ಭಾಗವಾಗಿದ್ದೇನೆ ಎಂದು ನಂಬಿದ್ದೇನೆ. ಜೆಡಿಯು ಕೇವಲ ನಿತೀಶ್ ಕುಮಾರ್ ಪಕ್ಷವಲ್ಲ. ನನ್ನ ಪಕ್ಷವೂ ಹೌದು ಎಂದಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿತೀಶ್ ಕುಮಾರ್ ಅವರನ್ನ ಎನ್‍ಡಿಎಗೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *