ಆಟೋ-ಲಾರಿ ನಡುವೆ ಡಿಕ್ಕಿ- ನಾಲ್ವರು ಸ್ಥಳದಲ್ಲೇ ಸಾವು

Public TV
1 Min Read

ಚಿತ್ರದುರ್ಗ: ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹರ್ತಿಕೋಟೆ ಬಳಿ ನಡೆದಿದೆ.

ಹಿರಿಯೂರು ಪಟ್ಟಣದ ಸಮೀಪವಿರುವ ನಂಜಯ್ಯನ ಕೊಟ್ಟಿಗೆ ನಿವಾಸಿಗಳಾದ ಮನೋಹರ್, ಶರಣ್, ಮುತ್ತು ಹಾಗು ಮದಕರಿಪುರ ಗ್ರಾಮದ ನಿವಾಸಿ ಚಿದಾನಂದ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರ ಹೆಸರು ತಿಳಿದುಬಂದಿಲ್ಲ. ಲಾರಿ ಚಾಲಕನ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಅಪಘಾತದ ಬಳಿಕ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಆಟೋ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಬರುತ್ತಿತ್ತು. ಲಾರಿ ಚಳ್ಳಕೆರೆ ಕಡೆಯಿಂದ ಹಿರಿಯೂರಿನ ಕಡೆಗೆ ಹೋಗುತ್ತಿತ್ತು. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಸಂಬಂಧ ಘಟನಾ ಸ್ಥಳಕ್ಕೆ ಐಮಂಗಳ ಪೊಲೀಸರು ಆಗಮಿಸಿ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದ್ದಾರೆ. ಐಮಂಗಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *