ಬಾಗೇಪಲ್ಲಿಯಲ್ಲಿ ಭಾರೀ ಮಳೆ, ರೈತರಿಗೆ ಸಂತಸ

Public TV
0 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಾದ್ಯಾಂತ ಭಾರೀ ಮಳೆ ಯಾಗುತ್ತಿರುವುದರಿಂದ ರೈತರಿಗೆ ಸಂತಸ ಮೂಡಿಸಿದೆ.

ಬಾಗೇಪಲ್ಲಿ ತಾಲೂಕಿನಲ್ಲಿ ಇಂದು ಮುಂಜಾನೆ 4 ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಅಲ್ಲಿಯ ಪಟ್ಟಣದ ರಸ್ತೆಗಳ ತುಂಬೆಲ್ಲಾ ತಗ್ಗು ಪ್ರದೇಶಗಳು ಜಲಾವೃತಗೊಂಡು ಹಲವು ಮನೆಗಳಿಗೆ ನೀರು ನುಗ್ಗಿದೆ.

ಈ ಭಾರೀ ಮಳೆಯಿಂದ ಕೆರೆ- ಕುಂಟೆಗಳಿಗೆ ನೀರು ಹರಿದು ಬರುತ್ತಿದೆ. ರೈತರು ತುಂಬಾ ಸಂತಸಗೊಂಡಿದ್ದಾರೆ. ಮಳೆ ನೀರಿನ ರಭಸಕ್ಕೆ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳು ಕೊಚ್ಚಿ ಹೋಗಿದೆ.

Share This Article
Leave a Comment

Leave a Reply

Your email address will not be published. Required fields are marked *