ಗೌರಿ ಲಂಕೇಶ್ ಹತ್ಯೆ- ರವೀಂದ್ರ ಕಲಾಕ್ಷೇತ್ರದಲ್ಲಿಂದು ಅಂತಿಮ ದರ್ಶನ

Public TV
1 Min Read

ಬೆಂಗಳೂರು: ಮಂಗಳವಾರ ರಾತ್ರಿ ಹೋರಾಟಗಾರ್ತಿ, ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ನಡೆದಿದ್ದು, ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ.

ಮರಣೋತ್ತರ ಪರೀಕ್ಷೆಯ ಬಳಿಕ ಅಂದರೆ 10 ಗಂಟೆಯ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಸಿಸಿಟಿವಿಯಲ್ಲಿ ಗೌರಿ ಅವರ ಹತ್ಯೆಯ ಸಂಪೂರ್ಣ ಚಿತ್ರಣ ಸೆರೆಯಾಗಿದ್ದು, ಆರೋಪಿಗಳ ಚಹರೆ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಗಾಂಧಿ ಬಜಾರ್ ಕಚೇರಿಯಿಂದ ಫಾಲೋ ಮಾಡಿದ ಆಗಂತುಕರು ಗೌರಿ ಅವರು ಮನೆಯ ಒಳಗಡೆ ಹೋಗುವಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಗೊಳಗಾದ ಗೌರಿ ಲಂಕೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

https://www.youtube.com/watch?v=E5KklglYg8o

Share This Article
Leave a Comment

Leave a Reply

Your email address will not be published. Required fields are marked *