ಬಿಎಸ್‍ವೈ ಆಪ್ತರೇ ಮುಂದಿನ ಚುನಾವಣೆಯಲ್ಲಿ ವೇಣುಗೋಪಾಲ್‍ಗೆ ಟಾರ್ಗೆಟ್

Public TV
1 Min Read

ಬೆಂಗಳೂರು: ಬಿಜೆಪಿ ತಂತ್ರಕ್ಕೆ ಟಿಟ್ ಫಾರ್ ಟ್ಯಾಟ್ ಕೊಡಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಅತ್ತ ಅಮಿತ್ ಶಾ ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಕಣ್ಣು ಹಾಕುತ್ತಿರುವ ಬೆನ್ನಲ್ಲೇ ಬಿಜೆಪಿ ಕ್ಷೇತ್ರಗಳಲ್ಲಿ ಮೇಲೆ ಕಾಂಗ್ರೆಸ್ ತನ್ನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಬಿಎಸ್‍ವೈಗೆ ಶಾಕ್ ಕೊಡಲು ಸಿದ್ದತೆ ನಡೆಸಿರುವ ಉಸ್ತುವಾರಿ ವೇಣುಗೋಪಾಲ್, ಬಿಎಸ್‍ವೈ ಆಪ್ತ ಅರವಿಂದ ಲಿಂಬಾವಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆ ಮನೆ ಪ್ರಚಾರ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮವನ್ನು ಕೊನೇ ಕ್ಷಣದಲ್ಲಿ ಮಹದೇವಪುರ ಕ್ಷೇತ್ರದಲ್ಲಿ ನಡೆಸಲು ವೇಣುಗೋಪಾಲ ಸೂಚನೆ ನೀಡಿದ್ದಾರೆ. ಹೀಗಾಗಿ  ಸೆ.23 ರಂದು ಅರವಿಂದ್ ಲಿಂಬಾವಳಿ ಕ್ಷೇತ್ರದಲ್ಲಿ ನಡೆಸಲು ನಿರ್ಧಾರಿಸಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ 6,149 ಮತಗಳ ಅಂತರದಿಂದ ಅಂತರದಿಂದ ಸೋಲು ಕಂಡಿದ್ದರು.ಈ ಕಾರಣದಿಂದ ಈ ಕ್ಷೇತ್ರದಿಂದ ಮನೆ ಮನೆ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಾಂಗ್ರೆಸ್ ಮುಂದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *