ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಖದೀಮರ ಕಾಲಿಗೆ ಗುಂಡು

Public TV
1 Min Read

ಬೆಂಗಳೂರು: ನಗರದಲ್ಲಿ ಅಂಗಡಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರು ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ರೋಲಿಂಗ್ ಶಟರ್ ಮುರಿದು ಕಳ್ಳತನಕ್ಕೆ ಯತ್ನಿಸುತ್ತಿದ್ದ ನಾರಾಯಣಸ್ವಾಮಿ ಮತ್ತು ಅಶೋಕ್ ಮೇಲೆ ಖಾಕಿಗಳು ಶೂಟೌಟ್ ನಡೆಸಿದ್ದಾರೆ. ಇವರ ಜೊತೆಗಿದ್ದ ಇನ್ನೋರ್ವ ಕಳ್ಳ ಸುಧಾಕರ್‍ನನ್ನು ಅರೆಸ್ಟ್ ಮಾಡಿದ್ದಾರೆ.

ಈ ಕುರಿತು ಸಂಚಾರ ವಿಭಾಗದ ಪಶ್ಚಿಮ ಡಿಸಿಪಿ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಪಿಗಳು ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದಾಗ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಯ್ತು. ಖಚಿತ ಮಾಹಿತಿ ಮೇರೆಗೆ ಇನ್ಸ್‍ಪೆಕ್ಟರ್ ಪುನೀತ್ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಆರೋಪಿಗಳು ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಬಂಧಿಸಲು ಯತ್ನಿಸಿದಾಗ ಆರೋಪಿಗಳು ಏಕಾಏಕಿ ವಿದ್ಯಾರಣ್ಯಪುರ ಎಸ್ ಐ ಅಣ್ಣಯ್ಯ ಮೇಲೆ ಚಾಕುವಿನಿಂದ ಇರಿಯಲು ಮುಂದಾದ್ರು. ಹೀಗಾಗಿ ತಮ್ಮ ಆತ್ಮರಕ್ಷಣೆಗೆ ಗುಂಡು ಹಾರಿಸಲಾಯಿತು. ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರೂ ಬಗ್ಗದಿದ್ದಾಗ ಆರೋಪಿಗಳಾದ ಅಶೋಕ್ ಮತ್ತು ನಾರಾಯಣಸ್ವಾಮಿ ಕಾಲಿಗೆ ಗುಂಡು ಹಾರಿಸಲಾಗಿದೆ ಅಂತ ಹೇಳಿದ್ರು.

ಖದೀಮರ ವಿರುದ್ಧ ಉಡುಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರಕರಣಗಳಿವೆ ಎಂಬುವುದಾಗಿ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *