ಮಣಿಪಾಲದಲ್ಲಿ ಗೂಳಿ ಮೇಲೆ ತಲ್ವಾರ್ ದಾಳಿ- ಚಿಂತಾಜನಕ ಸ್ಥಿತಿಯಲ್ಲಿ ಮೂಕ ಪ್ರಾಣಿ!

Public TV
1 Min Read

ಉಡುಪಿ: ಅಕ್ರಮ ಕಸಾಯಿಖಾನೆಗೆ ಕೊಂಡೊಯ್ಯಲು ತಲವಾರಿನಿಂದ ಗೂಳಿಗೆ ಕಡಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಕಸಾಯಿಖಾನೆಯ ಗುಂಪೊಂದು ಮಣಿಪಾಲದಲ್ಲಿ ಹೊರಿಯನ್ನು ಟೆಂಪೋದೊಳಗೆ ತುಂಬಿಸಲು ಯತ್ನಿಸಿತ್ತು. ಈ ಸಂದರ್ಭ ಗೂಳಿ ಸಹಕರಿಸದಿದ್ದಾಗ ದುಷ್ಕರ್ಮಿಗಳು ತಲ್ವಾರಿನಿಂದ ಕಡಿದಿದ್ದಾರೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡು ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಗೂಳಿಯನ್ನು ಸಮಾಜ ಸೇವಕ ನಿತ್ಯಾನಂದ ರಕ್ಷಿಸಿದ್ದಾರೆ.

ಮಣಿಪಾಲ ವಿವಿಯ ವಿದ್ಯಾರ್ಥಿಗಳು ಈ ಮಾನವೀಯ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಮಣಿಪಾಲದ ಎಂ.ಐ.ಸಿ ಬಳಿ ಗೂಳಿಯೊಂದು ಮಾರಕಾಯುಧಗಳಿಂದ ಕಡಿದ ರೀತಿಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ಒದ್ದಾಡುತ್ತಿತ್ತು. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಈ ಪರಿಸರದ ನಿವಾಸಿಗಳು ಹೋರಿಗೆ ಔಷದೋಪಚಾರ ಮಾಡಿದ್ದಾರೆ.

ಹೋರಿಯು ಚಿಂತಾಜನಕ ಸ್ಥಿತಿಗೆ ತಲುಪಿದಾಗ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿ ಹೋರಿಯನ್ನು ರಕ್ಷಿಸುವಂತೆ ಫೋನ್ ಕರೆ ಮೂಲಕ ಕಾಲೇಜು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಕರೆಗೆ ಸ್ಪಂದಿಸಿದ ನಿತ್ಯಾನಂದ, ವಿನಯಚಂದ್ರ ಹೋರಿಯ ರಕ್ಷಣೆಗೆ ಮುಂದಾದರು.

ಹೋರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ಡಾ. ಪ್ರಶಾಂತ್ ನೀಡಿದರು. ಸದ್ಯ ಬ್ರಹ್ಮಾವರದ ನೀಲಾವರ ಗೋ ಶಾಲೆಗೆ ಗೂಳಿಯನ್ನು ರವಾನಿಸಲಾಗಿದೆ. ಉಡುಪಿ ಅಗ್ನಿ ಶಾಮಕ ದಳ ಹಾಗೂ ಸಾರ್ವಜನಿಕ ನೆರವಿನಿಂದ ಹೊರಿಯನ್ನು ವಿನೋದ್ ನಾಯಕ್ ಇವರ ವಾಹನದಲ್ಲಿ ಉಚಿತವಾಗಿ ಸಾಗಿಸಲಾಯಿತು.

 

Share This Article
Leave a Comment

Leave a Reply

Your email address will not be published. Required fields are marked *