ಭಾರತವನ್ನು ಟೀಕಿಸಲು ಹೋಗಿ ತನ್ನ ಮಾನವನ್ನು ತಾನೇ ಹರಾಜು ಹಾಕಿತು ಪಾಕಿಸ್ತಾನ!

Public TV
3 Min Read

ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಆರೋಪಗಳನ್ನು ಮಾಡಲು ಹೋಗಿ ತನ್ನ ಮಾನವನ್ನೇ ಹರಾಜು ಹಾಕಿ ನಗೆಪಾಟಲಿಗೆ ಪಾಕಿಸ್ತಾನ ಗುರಿಯಾಗಿದೆ.

ವಿಶ್ವ ಸಂಸ್ಥೆಯ 72ನೇ ಮಹಾ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ನೈಜ ಬಣ್ಣವನ್ನು ತೆರೆದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತ ಭಯೋತ್ಪಾದನೆಯ ತವರು ನೆಲ ಎಂಬ ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ಮಾಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮಾನ ವಿಶ್ವಸಂಸ್ಥೆಯಲ್ಲಿ ತನ್ನ ಅಧಿಕಾರಿಯ ಮೂಲಕ ಹರಾಜು ಆಗಿದೆ.

ಪಾಕಿಸ್ತಾನ ಪ್ರತಿನಿಧಿ ಮಲೇಹಾ ಲೋಧಿ ಭಾರತದಲ್ಲಿ ಹೇಗೆ ಹಿಂಸಾಚಾರ ನಡೆಯುತ್ತಿದೆ ಎನ್ನುವುದನ್ನು ವಿಶ್ವಕ್ಕೆ ತೋರಿಸಲು ಪೆಲೆಟ್ ಗನ್‍ನಿಂದ ಗಾಯಗೊಂಡಿದ್ದ ಯುವತಿ ಫೋಟೋವನ್ನು ಪ್ರದರ್ಶಿಸಿದ್ದರು. ಆದರೆ ಈ ಫೋಟೋ ಗಾಜಾ ಯುದ್ಧ ಸಂದರ್ಭದಲ್ಲಿನ ಫೋಟೋ ಎಂದು ಮಾಧ್ಯಮಗಳು ಪ್ರಕಟಿಸುವ ಮೂಲಕ ಪಾಕ್ ನೈಜ ಬಣ್ಣವನ್ನು ಬಯಲು ಮಾಡಿವೆ.

ಗಾಜಾ ಯುದ್ಧದ ಸಂದರ್ಭದಲ್ಲಿ ದಾವಿ ಅಬು ಜೊಮ್(17) ಯುವತಿ ಗಾಯಗೊಂಡಿದ್ದಳು. ಈ ಫೋಟೋವನ್ನು ಪಾಕ್ ಅಧಿಕಾರಿ ಪ್ರದರ್ಶಿಸಿದ ಬಳಿಕ ವಿಶ್ವದಾದ್ಯಂತ ಪಾಕ್ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ.

 

ಮಲೇಹಾ ಲೋಧಿ ಹೇಳಿದ್ದು ಏನು?
ಸುಷ್ಮಾ ಸ್ವರಾಜ್ ಅವರಿಗೆ ತಿರುಗೇಟು ನೀಡಿದ ಲೋಧಿ ಏಷ್ಯಾ ಖಂಡದಲ್ಲಿ ಭಾರತ ಭಯೋತ್ಪದನೆಯ ತವರು ನೆಲ ಎಂಬ ಆರೋಪವನ್ನು ಮಾಡಿದರು. ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದನ ನೆಲೆಗಳಿವೆ ಎಂದಿದ್ದಾರೆ.

ಸುಷ್ಮ ಸ್ವರಾಜ್ ಅವರು ಶನಿವಾರ ಪಾಕಿಸ್ತಾನದಲ್ಲಿ ನೆಲೆಯುರಿರುವ ಭಯೋತ್ಪಾದನ ಸಂಸ್ಥೆಗಳಾದ ಲಷ್ಕರ್ ಎ ತೋಯ್ಬಾ, ಜೈಷ್ ಎ ಮೊಹಮ್ಮದ್, ಹಿಜ್ಜುಲ್ ಮುಜಾಹಿದೀನ್, ಹಕ್ಕಾನಿಯಂತಹ ಹಲವು ಸಂಘಟನೆಗಳ ಕುರಿತು ವಿಸ್ತಾರವಾದ ಮಾಹಿತಿಯನ್ನು ನೀಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಲೋಧಿ, ಅಂತರಾಷ್ಟ್ರೀಯ ಸಂಸ್ಥೆಗಳು ಭಾರತ ಹಾಗೂ ಪಾಕಿಸ್ತಾನದ ನಡುವೆ ಶಾಂತಿ ಹಾಗೂ ಸೌರ್ಹದತೆಯನ್ನು ಬಯಸಿದರೆ, ಭಾರತವು ಗಡಿಯಲ್ಲಿ ಉಂಟುಮಾಡುತ್ತಿರುವ ಪ್ರಚೋದನೆ ಹಾಗೂ ಅಕ್ರಮಾಣಕಾರಿ ಪ್ರವೃತ್ತಿಯನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು. ಅಲ್ಲದೇ ಭಾರತದ ನೆಲದಲ್ಲಿ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಪಾಕ್ ಆಕ್ರಮಿತ ಕಾಶ್ಮೀರದ ಬಾಲುಚಿಸ್ತಾನ ವಿಷಯದಲ್ಲಿ ಮಧ್ಯ ಪ್ರವೇಶಿಸುವ ಕುರಿತು ಸಹ ಪಾಕಿಸ್ತಾನದಿಂದ ಆಕ್ಷೇಪ ವ್ಯಕ್ತಪಡಿಸಿತು.

ಯಾವುದೇ ಸಮಸ್ಯೆಯನ್ನು ಎರಡು ದೇಶಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳದಿದ್ದರೆ ಇದರ ವಿಚಾರಣೆಯನ್ನು ನಡೆಸುವ ಅಧಿಕಾರ ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳಿಗಿದೆ. ಆದರೆ ಇಂತಹ ನಿಯಮಗಳು ಸಮಯಕ್ಕೆ ಸರಿಯಾಗಿ ಕೈಗೊಳ್ಳಲಾಗುತ್ತಿಲ್ಲ. ನ್ಯಾಯಲಯಕ್ಕೆ ಯಾವುದೇ ಅಂತಿಮ ದಿನವಿರುದಿಲ್ಲ. ಹಾಗೆಯೇ ಮಾನವಿಯತೆಯನ್ನು ಸಮಯದ ಅಧಾರವಾಗಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಭಾರತವು ವಿಶ್ವ ಸಂಸ್ಥೆಯ ನಿರ್ಧಾರಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಭಾರತದ ಆರೋಪಗಳನ್ನು ತಳ್ಳಿ ಹಾಕಿದ ಅವರು ವಿಶ್ವ ಸಂಸ್ಥೆಯೇ ಭಯೋತ್ಪಾದನೆಯ ವ್ಯಾಖ್ಯಾನವನ್ನು ನೀಡಬೇಕು ಎಂದು ಕೋರಿದರು. ಭಾರತವು ತನ್ನ ನೆರೆಯ ದೇಶಗಳ ಮೇಲೆ ದಾಳಿಯನ್ನು ಮಾಡಲು ಭಯೋತ್ಪಾದನೆಯನ್ನು ಮಾಡಲು ಪೋಷಣೆ ಮಾಡುತ್ತಿದೆ. ಪಾಕಿಸ್ತಾನದ ವಿವಿಧೆಡೆ ವಿದ್ವಾಂಸಕ ಕೃತ್ಯಗಳನ್ನು ನಡೆಸಲು ಯೋಜನೆ ರೂಪಿಸಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಭಾರತವು ಭಯೋತ್ಪಾದನೆಯ ತವರು ನೆಲ ಎಂಬ ಸ್ಪಷ್ಟವಾಗುತ್ತದೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಎಂಬುವುದು ವಿಶ್ವ ದೊಡ್ಡ ಬುಟಾಟಿಕೆಯಾಗಿದೆ. ಫ್ಯಾಸಿಸ್ಟ್ ಸಿದ್ಧಾಂತವನ್ನು ಅನುಸರಿಸುವ ಮೂಲಕ ಭಾರತ ತನ್ನ ಅಡಳಿತವನ್ನು ನಡೆಸುತ್ತಿದೆ ಎಂದರು.

ಪಾಕಿಸ್ತಾನದ ಸ್ಥಾಪಕ ಜಿನ್ನಾ ಅವರ ಕುರಿತ ಹೇಳಿಕೆಗಳನ್ನು ನಿರಾಕರಿಸಿದ ಲೋಧಿ, ಪಾಕಿಸ್ತಾನ ಜಮ್ಮು ಕಾಶ್ಮೀರ ವಿಚಾರವಾಗಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಮಾತುಕತೆಗೆ ಸಿದ್ಧ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *