ಸ್ನೇಹಿತೆಯ ಆತ್ಮಹತ್ಯೆಗೆ ಮನನೊಂದು ಯುವತಿ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಸ್ನೇಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಆಕೆಯ ಗೆಳತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಶ್ರೀರಾಂಪುರ ಬಳಿ ಇರುವ ಎಲ್ ಎನ್ ಪುರದಲ್ಲಿ ನಡೆದಿದೆ.

21 ವರ್ಷದ ಭುವನೇಶ್ವರಿ ಆತ್ಮಹತ್ಯೆಗೆ ಶರಣಾದ ಯುವತಿ. ಮೂರು ತಿಂಗಳ ಹಿಂದೆ ಭುವನೇಶ್ವರಿಯ ಆಪ್ತ ಸ್ನೇಹಿತೆ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಬ್ಬರೂ ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಲಕ್ಷ್ಮೀ ಸಾವಿನ ಬಳಿಕ ನಿದ್ದೆಯಲ್ಲೂ ಸ್ನೇಹಿತೆಯ ಆತ್ಮಹತ್ಯೆ ಬಗ್ಗೆ ಭುವನೇಶ್ವರಿ ಕನವರಿಸುತ್ತಿದ್ದರು ಎಂದು ಹೇಳಲಾಗಿದೆ.

ಗೆಳತಿಯ ಸಾವಿನಿಂದ ಖಿನ್ನತೆಗೊಳಗಾಗಿದ್ದ ಭುವನೇಶ್ವರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿಯವರ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *