`ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?

Public TV
1 Min Read

ಬೆಂಗಳೂರು: ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.

ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.

ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *