ಕೊಪ್ಪಳದಲ್ಲಿ ಕರಡಿ ದಾಳಿಗೊಳಗಾಗಿ ಮಹಿಳೆ ಗಂಭೀರ

Public TV
0 Min Read

ಕೊಪ್ಪಳ: ಮಹಿಳೆಯೊಬ್ಬರ ಮೇಲೆ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಳಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಗಂಗಾವತಿ ತಾಲೂಕಿನ ಮುಸಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಗೊಳಗಾದ ಮಹಿಳೆಯನ್ನು ಹನುಮಮ್ಮ ದ್ಯಾಮಣ್ಣ ಭೋವಿ ಎಂದು ಗುರುತಿಸಲಾಗಿದೆ.

ಕರಡಿ ದಾಳಿ ಸುದ್ದಿ ತಿಳಿದು ಗ್ರಾಮಸ್ಥರು ಗಂಭೀರ ಗಾಯಗೊಂಡ ಮಹಿಳೆಯನ್ನು ರಕ್ಷಿಸಿ, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 3 ಕರಡಿಗಳು ಗ್ರಾಮದ ಪಕ್ಕದಲ್ಲಿನ ಹೊಲದಲ್ಲೇ ಅಡಗಿ ಕುಳಿತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕರಡಿ ಹಿಡಿಯಲು ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಕೈಯಲ್ಲಿ ಬಡಿಗೆಗಳನ್ನು ಹಿಡಿದು ಕರಡಿಗಾಗಿ ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *