ಸಿಎಂಗೆ ಇದು ಕೊನೆ ದೀಪಾವಳಿ ಎಂದು ಭವಿಷ್ಯ ನುಡಿದ ಸಂಸದ ಪ್ರಹ್ಲಾದ್ ಜೋಶಿ

Public TV
1 Min Read

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೇ ಕೊನೆಯ ದೀಪಾವಳಿಯಾಗಲಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ.

ಮುಂದಿನ ಬಾರಿಯು ನಾನೇ ಸಿಎಂ ಎಂದು ಸಿಎಂ ಹೇಳಿಕೊಂಡು ತಿರುಗುತ್ತಿದ್ದಾರೆ. ಆದ್ರೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇದು ಕಾಂಗ್ರೆಸ್ ಸರ್ಕಾರದ ಕೊನೆಯ ಆಡಳಿತಾವಧಿಯಾಗಲಿದೆ ಎಂದು ಹೇಳಿಕೆ ನೀಡಿದರು.

ಈಗಾಗಲೇ ಕಾಂಗ್ರೆಸ್ ಮನೆ ಮನೆಗೆ ಹೊರಟಿದ್ದು, ಜನರಿಗೆ ಕೊನೆಯದಾಗಿ ಕಾಂಗ್ರೆಸ್ ಪಕ್ಷದ ಅಂತಿಮ ದರ್ಶನ ಪಡೆದುಕೊಳ್ಳಲಿ ಎಂದು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಾಧನೆ ಮಾಡದೆ, ಇಲ್ಲದ ಸಾಧನೆಗಳನ್ನು ತೋರಿಸಲು ಹೊರಟಿದೆ. ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಯಾತ್ರೆ ಮಾಡುತ್ತಿದೆ. ಸಾರ್ವಜನಿಕರ ಹಣವನ್ನು ಯಾತ್ರೆ, ಸಮಾವೇಶದ ಹೆಸರಿನಲ್ಲಿ ಕಿತ್ತು ತಿನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಟಿಪ್ಪು ಜಯಂತಿಗೆ ನಮ್ಮದು ಯಾವಾಗಲೂ ವಿರೋಧವಿದೆ. ಸರ್ಕಾರದ ಹಠಕ್ಕೆ ಬಿದ್ದು ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ. ಟಿಪ್ಪು ಕನ್ನಡ ಭಾಷೆ, ಸಂಸ್ಕತಿ, ಹಿಂದೂ ವಿರೋಧಿಯಾಗಿದ್ದ ಟಿಪ್ಪುನಿಂತವನ ಜಯಂತಿ ಆಚರಣೆ ಸಹಿಸಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಟಿಪ್ಪು ಜಯಂತಿ ರದ್ದುಗೊಳಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *