ಈಜಲು ಹೋಗಿ ಮೂವರು ಬಾಲಕರು ನೀರುಪಾಲು

Public TV
0 Min Read

ಚಿತ್ರದುರ್ಗ: ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.

ಹೆಗ್ಗೆರೆ ಗ್ರಾಮದ ಕೆಂಪರಾಜ್ (14), ಕಾಂತರಾಜ್ (14) ಹಾಗು ಮಹಾಂತೇಶ್ ನೀರುಪಾಲಾದ ಬಾಲಕರು. ಶುಕ್ರವಾರ ಮಧ್ಯಾಹ್ನ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕದಳ ಹಾಗೂ ಹೊಸದುರ್ಗ ಪೊಲೀಸರು ಶವಗಳಿಗೆ ಶೋಧಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ಮೂವರು ಬಾಲಕರ ಶವ ಪತ್ತೆಯಾಗಿವೆ. ಕೆರೆಯ ಅಂಗಳದಲ್ಲಿ  ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಈ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *