ಕನ್ನಡ ರಾಜ್ಯೋತ್ಸವದ ದಿನವೇ ಪ್ರತ್ಯೇಕ ರಾಜ್ಯಕ್ಕಾಗಿ ಕಲಬುರಗಿಯಲ್ಲಿ ಹೋರಾಟ

Public TV
1 Min Read

ಕಲಬುರಗಿ: ಇಂದು ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆದರೆ ಬಿಸಿಲೂರು ಕಲಬುರಗಿಯಲ್ಲಿ ಮಾತ್ರ ಪ್ರತ್ಯೇಕತೆಯ ಕೂಗು ತೀವ್ರಗೊಂಡಿದೆ. ರಾಜ್ಯೋತ್ಸವದ ದಿನವಾದ ಇಂದೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟಗಳು ನಡೆದಿವೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ಇಂದು ಬೆಳ್ಳಂ ಬೆಳಿಗ್ಗೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಲ್ ಬಳಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾಗಿದ್ದು, ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ಮುಂದಾಗುತ್ತಿದ್ದಂತೆಯೇ ಹೋರಾಟಗಾರರು ಬಂಧನಕ್ಕೆ ಬೆದರಿ ಓಡಿ ಹೋಗುವ ಮೂಲಕ ನಗೆಪಾಟಲಿಗೀಡಾದರು. ಇನ್ನೊಂದಡೆ ಹೈದರಾಬಾದ್ – ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರೂ ಸಹ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಲ್ ನಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಿದರು. ಈ ಕಾರ್ಯಕರ್ತರನ್ನೂ ಸಹ ಪೊಲೀಸರು ವಶಕ್ಕೆ ತೆಗೆದುಕೊಂಡರು.

Share This Article
Leave a Comment

Leave a Reply

Your email address will not be published. Required fields are marked *