ಮದ್ವೆ ಮನೆಯಿಂದ ವಾಪಸ್ಸಾಗ್ತಿದ್ದ 70 ಜನರಿದ್ದ ಬಸ್ ಮರಕ್ಕೆ ಡಿಕ್ಕಿ

Public TV
1 Min Read

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರದ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನ ಮುಗಿಸಿಕೊಂಡು ವಾಪಸ್ಸಾಗುತ್ತಿದ್ರು. ಈ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬೈಯಪ್ಪನಹಳ್ಳಿ ಗೇಟ್ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ನಲ್ಲಿ 70ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಅದೃಷ್ಟವಷತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಪಘಾತದ ರಭಸಕ್ಕೆ ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *