ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

Public TV
1 Min Read

ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದು ಹೇಳಿದರು.

ಐಟಿ ದಾಳಿಯಿಂದ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಮಾಹಿತಿ ಸಿಕ್ಕ ನಂತರವೇ ಇಡೀ ಕುಟುಂಬವನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಿದ್ದಾರೆ. ಇದಾದ ನಂತರ ಅನಿವಾರ್ಯವಾಗಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

 

ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

 

 

 

Share This Article
Leave a Comment

Leave a Reply

Your email address will not be published. Required fields are marked *